ಸರ್ಕಾರಿ ನೌಕರರು ಆರ್ ಎಸ್ಎಸ್ ನಲ್ಲಿರಬಾರದು ಎಂದು ಎಲ್ಲೂ ಹೇಳಿಲ್ಲ: ವಿಜಯೇಂದ್ರ

Krishnaveni K
ಮಂಗಳವಾರ, 21 ಅಕ್ಟೋಬರ್ 2025 (17:43 IST)
ಬೆಂಗಳೂರು: ಸರ್ಕಾರಿ ನೌಕರರು ಆರ್ ಎಸ್ಎಸ್ ಚಟುವಟಿಕೆಯಲ್ಲಿ ಪಾಲ್ಗೊಳ್ಳಬಾರದು ಎಂದು ಹೇಳಿಲ್ಲ. ಈ ವಿಚಾರದಲ್ಲಿ ಕಾಂಗ್ರೆಸ್ ಮೊದಲು ಸಂವಿಧಾನ ಓದಿ ತಿಳಿದುಕೊಳ್ಳಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ.

ರಾಜ್ಯ ಸರ್ಕಾರದ ನೌಕರರು ಆರ್ ಎಸ್ಎಸ್ ಚಟುವಟಿಕೆಯಲ್ಲಿ ಭಾಗಿಯಾದರೆ ಅವರನ್ನು ಸಸ್ಪೆಂಡ್ ಮಾಡಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಈಗಾಗಲೇ ಸುತ್ತೋಲೆ ಹೊರಡಿಸಿದ್ದಾರೆ. ಅಲ್ಲದೆ ಈಗಾಗಲೇ ಆರ್ ಎಸ್ಎಸ್ ಚಟುವಟಿಕೆಯಲ್ಲಿ ಭಾಗಿಯಾದ ನೌಕರರನ್ನು ಸಸ್ಪೆಂಡ್ ಮಾಡಲಾಗಿದೆ.

ಈ ಬಗ್ಗೆ ವಿಜಯೇಂದ್ರ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ‘ಸರ್ಕಾರಿ ನೌಕರರು ರಾಷ್ಟ್ರೀಯ ಸ್ವಯಂಸೇವಕ ಸಂಘದೊಂದಿಗೆ ಸಂಪರ್ಕ ಹೊಂದುವುದು ತಪ್ಪಲ್ಲವೆಂದು ದೇಶದ ನ್ಯಾಯಾಂಗ ವ್ಯವಸ್ಥೆಯು ಅತ್ಯಂತ ಸ್ಪಷ್ಟವಾಗಿ ಪುನರುಚ್ಚರಿಸುತ್ತಲೇ ಬಂದಿದೆ.

ಸರ್ಕಾರಿ ನೌಕರರು ಆರ್ ಎಸ್ಎಸ್ ಕಾರ್ಯಕ್ರಮ, ಚಟುವಟಿಕೆಗಳಲ್ಲಿ ಭಾಗವಹಿಸಬಹುದು ಎಂದು ಈ ಹಿಂದೆ ಹಲವಾರು ನ್ಯಾಯಾಲಯಗಳು ವಿವಿಧ ಪ್ರಕರಣಗಳಲ್ಲಿ ಮಹತ್ವದ ತೀರ್ಪುಗಳನ್ನು ನೀಡಿದೆ.

ರಾಜ್ಯದ ಕಾಂಗ್ರೆಸ್ ಸರ್ಕಾರ ರಾಷ್ಟ್ರೀಯ ಸ್ವಯಂಸೇವಕ ಸಂಘದ ಜೊತೆ ಗುರುತಿಸಿಕೊಳ್ಳುವ ಸರ್ಕಾರಿ ನೌಕರರ ಮೇಲೆ ಕ್ರಮಕೈಗೊಳ್ಳುವ ಮೊದಲು ದೇಶದ ಸಂವಿಧಾನ, ನ್ಯಾಯಾಲಯದ ತೀರ್ಪಿನ ಕುರಿತು ಅಧ್ಯಯನ ನಡೆಸಲಿ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾತ್ರಿ ಡ್ಯೂಟಿಯಲ್ಲಿದ್ದ ಪೊಲೀಸರ ಮೇಲೆ ದಾಳಿ, ಇಬ್ಬರು ಅರೆಸ್ಟ್‌

ನಿಂತಿದ್ದ ಲಾರಿಗೆ ಬೊಲೆರೋ ಡಿಕ್ಕಿ, ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವು

ನಾಳೆ ಸಿದ್ದರಾಮಯ್ಯ ರಾಜೀನಾಮೆ ವದಂತಿ: ಸಿಎಂ ನಿವಾಸದ ಬಳಿ ಶಾಸಕರು, ಸಚಿರ ದೌಡು

ಬಕ್ರೀದ್‌ ಹಬ್ಬ: ಗೋಹತ್ಯೆ, ಅಕ್ರಮ ಮಾಂಸ ಮಾರಾಟ ತಡೆಗೆ ಕಟ್ಟುನಿಟ್ಟಿನ ಕ್ರಮ

ರಾಜ್ಯದಲ್ಲಿ ಎಬೋಲಾ ಪ್ರಕರಣದ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವ ದಿನೇಶ್ ಗುಂಡೂರಾವ್‌

ಮುಂದಿನ ಸುದ್ದಿ
Show comments