Select Your Language

Notifications

webdunia
webdunia
webdunia
webdunia

ಆಣೆ, ಪ್ರಮಾಣ ವಿವಾದದ ನಂತರ ಧರ್ಮಸ್ಥಳಕ್ಕೆ ಭೇಟಿ ನೀಡಿದ ಬಿವೈ ವಿಜಯೇಂದ್ರ

BY Vijayendra visits Dharmasthala
ಮಂಗಳೂರು: ಕರ್ನಾಟಕ ವಿಧಾನಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದವರ ಪತ್ತೆಗೆ ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮಾಡುವುದಾಗಿ ಹೇಳಿ ವಿವಾದವಾದ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಇಂದು ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.

ಕರ್ನಾಟಕ ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿಯ ಶಾಸಕರು ಅಡ್ಡಮತದಾನ ಮಾಡಿದ್ದು ಹೈಕಮಾಂಡ್ ಕೆಂಗಣ್ಣಿಗೂ ಗುರಿಯಾಗಿತ್ತು. ಇದರ ಬೆನ್ನಲ್ಲೇ ವಿಜಯೇಂದ್ರ ಧರ್ಮಸ್ಥಳಕ್ಕೆ ಕರೆದುಕೊಂಡು ಹೋಗಿ ಪ್ರಮಾಣ ಮಾಡಿಸುವುದಾಗಿ ಹೇಳಿದ್ದರು. ಆದರೆ ರಾಜಕೀಯ ಕಾರಣಕ್ಕೆ ಧರ್ಮಸ್ಥಳ ಪುಣ್ಯ ಕ್ಷೇತ್ರವನ್ನು ಎಳೆದು ತರುವುದು ಬೇಡ ಎಂದು ಸ್ವಪಕ್ಷೀಯರೇ ಅಸಮಾಧಾನ ಹೊರಹಾಕಿದ ಮೇಲೆ ಈ ನಿರ್ಧಾರದಿಂದ ಹಿಂದೆ ಸರಿದಿದ್ದರು.

ಆದರೆ ಇಂದು ತಾವೇ ಖುದ್ದಾಗಿ ಧರ್ಮಸ್ಥಳಕ್ಕೆ ಭೇಟಿಯಾಗಿ ಪೂಜೆ ಮಾಡಿಸಿದ್ದಾರೆ. ಜೊತೆಗೆ ಕ್ಷೇತ್ರ ದರ್ಶನ, ಪೂಜೆ ಬಳಿಕ ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಡೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ಅವರಿಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಸುಳ್ಯ ಶಾಸಕಿ ಭಾಗೀರತಿ ಮುರುಳ್ಯ ಹಾಗೂ ಸ್ಥಳೀಯ ಬಿಜೆಪಿ ನಾಯಕರು ಸಾಥ್ ನೀಡಿದ್ದರು.


Share this Story:

Follow Webdunia kannada

ಮುಂದಿನ ಸುದ್ದಿ

ವಾಣಿಜ್ಯ ಎಲ್ ಪಿಜಿ ಖರೀದಿದಾರರಿಗೆ ಗುಡ್ ನ್ಯೂಸ್ ನೀಡಿದ ಕೇಂದ್ರ ಸರ್ಕಾರ