Webdunia - Bharat's app for daily news and videos

Install App

ಬಿವೈ ವಿಜಯೇಂದ್ರ ವರ್ಸಸ್ ಯತ್ನಾಳ್: ಬಿಜೆಪಿ ಕಾರ್ಯಕರ್ತರು ಫುಲ್ ಕನ್ ಫ್ಯೂಸ್

Krishnaveni K
ಬುಧವಾರ, 4 ಡಿಸೆಂಬರ್ 2024 (09:44 IST)
ಬೆಂಗಳೂರು: ರಾಜ್ಯ ಬಿಜೆಪಿ ಈಗ ಮನೆಯೊಂದು ಮೂರು ಬಾಗಿಲು ಎಂಬಂತಾಗಿದೆ. ಒಂದೆಡೆ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಟೀಂ, ಇನ್ನೊಂದೆಡೆ ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದ ಟೀಂ. ಇಬ್ಬರು ನಾಯಕರ ಜಗಳದಲ್ಲಿ ಕಾರ್ಯಕರ್ತರು ಫುಲ್ ಕನ್ ಫ್ಯೂಸ್ ಆಗಿದ್ದಾರೆ.

ಬಸನಗೌಡ ಪಾಟೀಲ್ ಯತ್ನಾಳ್ ಈ ಮೊದಲೇ ತಮ್ಮದೇ ತಂಡ ಕಟ್ಟಿಕೊಂಡು ವಕ್ಫ್ ವಿರುದ್ಧ ರಾಜ್ಯದ ಹಲವೆಡೆ ಸಂಚರಿಸಿ ಹೋರಾಟ ನಡೆಸಿದರು. ಇದೀಗ ಬಿವೈ ವಿಜಯೇಂದ್ರ ನೇತೃತ್ವದ ಟೀಂ ವಕ್ಫ್ ವಿರುದ್ಧ ಹೋರಾಟಕ್ಕೆ ಮುಂದಾಗಿದೆ. ಇಂದು ಕಲಬುರಗಿ, ಬೀದರ್ ಜಿಲ್ಲೆಗಳಲ್ಲಿ ವಿಜಯೇಂದ್ರ ನೇತೃತ್ವದ ಬಿಜೆಪಿ ಟೀಂ ಜನಾಂದೋಲನ ಹೋರಾಟ ಹಮ್ಮಿಕೊಂಡಿದೆ.

ಈಗ ಬಿಜೆಪಿ ಕಾರ್ಯಕರ್ತರಲ್ಲಿ ನಾವು ಯಾರನ್ನು ಬೆಂಬಲಿಸಬೇಕು ಎನ್ನುವ ದೊಡ್ಡ ಕನ್ ಫ್ಯೂಸ್ ಶುರುವಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷರನ್ನು ಬೆಂಬಲಿಸುವುದೋ ಕಟ್ಟಾ ಹಿಂದೂವಾದಿ ಯತ್ನಾಳ್ ಗುಂಪನ್ನು ಬೆಂಬಲಿಸುವುದೋ ಎಂಬ ಗೊಂದಲ ಕಾರ್ಯಕರ್ತರನ್ನು ಕಾಡುತ್ತಿದೆ.

ಇದರಿಂದಾಗಿ ಬಿಜೆಪಿ ಕಾರ್ಯಕರ್ತರಲ್ಲೇ ಗುಂಪುಗಳಾಗಿವೆ. ವಿಜಯೇಂದ್ರ ಅಭಿಮಾನಿಗಳು ಅವರ ಬಣದ ಹೋರಾಟ ಬೆಂಬಲಿಸಿದರೆ ಯತ್ನಾ ಳ್ ಅಭಿಮಾನಿಗಳು ಅವರ ಬಣದ ಹೋರಾಟವನ್ನು ಬೆಂಬಲಿಸುತ್ತಿದ್ದಾರೆ. ಈ ರೀತಿ ಕಾರ್ಯಕರ್ತರೂ ಒಂದೊಂದು ದಿಕ್ಕು ಆಗಿದ್ದರೆ ಹೋರಾಟ ಹಳ್ಳ ಹಿಡಿಯುವುದಂತೂ ಗ್ಯಾರಂಟಿ ಎಂಬ ಸ್ಥಿತಿ ನಿರ್ಮಾಣವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Siddaramaiah: ಇದೆಲ್ಲಾ ಚೆನ್ನಾಗಿರಲ್ಲ, ಆಂಧ್ರಪ್ರದೇಶ ಸಿಎಂಗೆ ಖಡಕ್ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಟೀಕೆಗಳ ಬಳಿಕ ಕೊನೆಗೂ ಹಣಕಾಸು ಆಯೋಗದ ಸಭೆಗೆ ಹೋಗಲು ತೀರ್ಮಾನಿಸಿದ ಸಿಎಂ ಸಿದ್ದರಾಮಯ್ಯ

Karnataka Caste census: ಜಾತಿಗಣತಿ ಮಾಡಲು ಯಾಕೆ ಕೋಟ್ಯಾಂತರ ರೂಪಾಯಿ ಖರ್ಚಾಗುತ್ತದೆ, ಇಲ್ಲಿದೆ ಸೀಕ್ರೆಟ್

Chinnaswamy stampede: ವಿರಾಟ್ ಕೊಹ್ಲಿ ಸ್ನೇಹಿತನ ಭವಿಷ್ಯ ಇಂದು ನಿರ್ಧಾರ

Funny video: ಗೆಜ್ಜೆ ಕಟ್ಟಿಸಲು ಆಟ ಆಡಿಸಿದ ವಧು, ಕೊನೆಗೆ ಆಗಿದ್ದೇನು

ಮುಂದಿನ ಸುದ್ದಿ
Show comments