Webdunia - Bharat's app for daily news and videos

Install App

ಸಮಾವೇಶ, ಸಭೆ ಕರೆಯಲು ಉದ್ದೇಶಿಸಿದ್ದರೆ ತಕ್ಷಣ ಹಿಂಪಡೆಯಿರಿ: ಬಿಜೆಪಿ ನಾಯಕರಿಗೆ ಬಿವೈ ವಿಜಯೇಂದ್ರ ವಾರ್ನ್

Krishnaveni K
ಭಾನುವಾರ, 15 ಡಿಸೆಂಬರ್ 2024 (11:25 IST)
ಬೆಂಗಳೂರು: ರಾಜ್ಯ ಬಿಜೆಪಿ ಈಗ ಒಡೆದ ಮನೆಯಂತಾಗಿರುವುದು ಗೊತ್ತಿರದ ವಿಚಾರವೇನೂ ಅಲ್ಲ. ಇದೀಗ ಬಂಡಾಯ ನಾಯಕರಿಗೆ ಬಿಸಿ ಮುಟ್ಟಿಸುವ ಕೆಲಸವನ್ನು ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮಾಡಿದ್ದಾರೆ.

ಟ್ವೀಟ್ ಮೂಲಕ ಬಂಡಾಯ ನಾಯಕರಿಗೆ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಯಾರೇ ನಾಯಕರು, ಸಂಘಟನೆಗಳು ಪ್ರತ್ಯೇಕ ಸಭೆ, ಸಮಾವೇಶ ಕರೆಯಲು ಉದ್ದೇಶಿಸಿದ್ದರೆ ತಕ್ಷಣವೇ ಅದನ್ನು ಹಿಂಪಡೆಯಿರಿ. ಬಿಜೆಪಿಯಲ್ಲಿ ಬಣ ರಾಜಕೀಯಕ್ಕೆ ಅವಕಾಶವಿಲ್ಲ ಎಂದು ವಿಜಯೇಂದ್ರ ಎಚ್ಚರಿಕೆ ನೀಡಿದ್ದಾರೆ.

‘ಬಣದ ಹೆಸರಿನಲ್ಲಿ ಸಭೆಗಳನ್ನು ಆಯೋಜಿಸುವುದನ್ನು ಒಪ್ಪಲಾಗದು. ಈ ನಿಟ್ಟಿನಲ್ಲಿ ಸಭೆ, ಸಮಾವೇಶಗಳನ್ನು ಯಾರೇ ಮಾಡಲು ಹೊರಟಿದ್ದರೂ ಕೂಡಲೇ ತಮ್ಮ ಚಟವಟಿಕೆಗಳನ್ನು ಸ್ಥಗಿತಗೊಳಿಸಬೇಕೆಂದು ವಿನಂತಿಸುವೆ.  ರಾಜ್ಯಾಧ್ಯಕ್ಷನಾಗಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷವನ್ನು ಇನ್ನಷ್ಟು ಬಲಗೊಳಿಸುವ ಕಾರ್ಯಕ್ರಮದಡಿಯಲ್ಲಿ ಪಕ್ಷದ ಹಿರಿಯರು, ಶಾಸಕರು, ಮಾಜಿ ಶಾಸಕರು ಹಾಗೂ ಪಕ್ಷದ ಎಲ್ಲಾ ಹಿರಿಯರೊಂದಿಗೆ ಅತೀ ಶೀಘ್ರದಲ್ಲೇ ಸಭೆ ಕರೆಯಲಿದ್ದೇನೆ.

ಭಾರತೀಯ ಜನತಾ ಪಾರ್ಟಿ ಕೂಡು ಕುಟಂಬವಿದ್ದಂತೆ. ಪಕ್ಷದ ಚೌಕಟ್ಟಿನಲ್ಲೇ ಪ್ರತಿಯೊಂದು ಸಭೆ, ಸಮಾವೇಶಗಳು ನಡೆಯಬೇಕೇ ಹೊರತು ಪಕ್ಷದ ನಿಯಮ, ಧ್ಯೇಯಗಳನ್ನು ಬದಿಗೆ ಸರಿಸಿ ಯಾವುದೇ ಚಟುವಟಿಕೆಗಳನ್ನು ನಡೆಸುವುದು ಸಂಘಟನೆಯ ಆಶಯಕ್ಕೆ ಪೂರಕವಾಗಿಲ್ಲದಿರುವುದನ್ನು ವಿನಮ್ರತೆಯಿಂದ ಸಹೃದಯರಲ್ಲಿ ತಿಳಿಯಪಡಿಸುತ್ತೇನೆ ಎಂದು ವಿಜಯೇಂದ್ರ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments