ಸಿದ್ದರಾಮಯ್ಯಗೆ ಹಿಂದೂಗಳು ಏನ್ ದ್ರೋಹ ಮಾಡಿದ್ದಾರೆ: ಯಡಿಯೂರಪ್ಪ ಪ್ರಶ್ನೆ

Sampriya
ಮಂಗಳವಾರ, 1 ಏಪ್ರಿಲ್ 2025 (18:00 IST)
ಬೆಂಗಳೂರು: ಕಾಂಗ್ರೆಸ್‌ಗೆ ಅಜೀರ್ಣ ಆಗುವಷ್ಟು ಬಹುಮತ ನೀಡಿದ್ದರಿಂದ ಇಂದು ಜನ ಹಿತ ಮರೆತು ರಾಜ್ಯದಲ್ಲಿ ತುಘಲಕ್ ದರ್ಬಾರ್‌ ಅನ್ನು  ನಡೆಸುತ್ತಿದೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಆಕ್ರೋಶ ಹೊರಹಾಕಿದ್ದಾರೆ.

ನಗರದಲ್ಲಿ ಮಾಧ್ಯಮದವರ ಬಳಿ ಮಾತನಾಡಿದ ಅವರು, ಸಿಎಂ ಆದವರು ಎಲ್ಲರನ್ನೂ ಸಮಾನವಾಗಿ ನೋಡಿಕೊಳ್ಳಬೇಕು. ಆದರೆ ಸಿದ್ದರಾಮಯ್ಯ ಅವರು ಮುಸ್ಲಿಮರಿಗೆ ನಾಲ್ಕು ಪರ್ಸೆಂಟ್‌ ಮೀಸಲಾತಿ ನೀಡಿ, ಹಿಂದೂಗಳಿಗೆ ದ್ರೋಹ ಬಗೆದಿದ್ದಾರೆ ಎಂದು ಅಸಮಾಧಾನ ಹೊರಹಾಕಿದರು.

ರಾಜ್ಯದ ಕಾಂಗ್ರೆಸ್‌ ಸರ್ಕಾರ ಪ್ರತಿ ತಿಂಗಳು ಒಂದಲ್ಲ ಒಂದು ಬೆಲೆ ಏರಿಕೆ ಮಾಡಿದೆ. ದೇಶದಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಕಡಿಮೆಯಾದರೆ  ಕರ್ನಾಟಕದಲ್ಲಿ ಮಾತ್ರ ಲೀಟರ್‌ಗೆ ಮೂರು ರೂಪಾಯಿ ಹೆಚ್ಚಳ ಮಾಡಿದ್ದಾರೆ. ವಿಶೇಷವಾಗಿ ಮೆಟ್ರೋ ದರವನ್ನು %100ರಷ್ಟು ಹೆಚ್ಚಿಸಿದ್ದಾರೆ. ಜನಸಾಮಾನ್ಯರು ಬಳಸುವ ಹಾಲಿನ ದರ ಇಂದೆಂದೂ ಇಲ್ಲದ ರೀತಿಯಲ್ಲಿ ಏರಿಕೆ ಮಾಡಿದ್ದಾರೆ.

ಬಹಳ ಮುಖ್ಯವಾಗಿ ವಿದ್ಯುತ್ ದರವನ್ನು ಪ್ರತಿ ಯ್ಯೂನಿಟ್‌ಗೆ 36ಪೈಸೆ ಹೆಚ್ಚು ಮಾಡಿದ್ದಾರೆ. ಈ ಸರ್ಕಾರ ಬಂದ್ಮೇಲೆ ಎರಡು ಬಾರಿ ವಿದ್ಯುತ್ ದರ ಏರಿಕೆಯಾಗಿದೆ. ಇದರಿಂದ ಮಧ್ಯಮ ವರ್ಗದ ಜನರಿಗೆ ಉಸಿರುಗಟ್ಟುವ ಪರಿಸ್ಥಿತಿ ಬಂದಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಬ್ರ್ಯಾಂಡ್‌ ಹೆಸರಿನಲ್ಲಿ ನಕಲಿ ತುಪ್ಪ‌ ಮಾರಾಟ ಜಾಲದ ಕಿಂಗ್‌ ಪಿನ್‌ ದಂಪತಿ ಸಿಸಿಬಿ ಬಲೆಗೆ

ಪಾಕ್‌ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸಾವು ವದಂತಿ: ಅಡಿಯಾಲಾ ಜೈಲಿನ ಮುಂದೆ ಹೈಡ್ರಾಮಾ

ಈ ವಿಚಾರಕ್ಕೆ ರಾಹುಲ್, ಸೋನಿಯಾ ಭೇಟಿಯಾಗಬೇಕೆಂದ ಮಲ್ಲಿಕಾರ್ಜುನ ಖರ್ಗೆ

ದೆಹಲಿ ಸ್ಪೋಟ, ಇಂದು ಬಂಧಿಯಾಗಿರುವ ಆರೋಪಿಯ ಕೈವಾಡ ಕೇಳಿದ್ರೆ ಶಾಕ್ ಆಗುತ್ತೆ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಬಿಗ್‌ ರಿಲೀಫ್‌, ತೀರ್ಪು ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments