Webdunia - Bharat's app for daily news and videos

Install App

ಗವರ್ನರ್ ತೆರಳಿದ ಬಳಿಕ ಭೈರತಿ ಸುರೇಶ್ ಪುತ್ರನ ನಿಶ್ಚಿತಾರ್ಥಕ್ಕೆ ಸಿಎಂ ಸಿದ್ದರಾಮಯ್ಯ ಹಾಜರ್

Sampriya
ಬುಧವಾರ, 28 ಆಗಸ್ಟ್ 2024 (17:18 IST)
Photo Courtesy X
ಬೆಂಗಳೂರು: ಇಂದು ಯಲಹಂಕದ ಬಿಜೆಪಿ ಶಾಸಕ ಎಸ್‌ಆರ್ ವಿಶ್ವನಾಥ್ ಪುತ್ರಿ ಅಪೂರ್ವ ಹಾಗೂ ಕಾಂಗ್ರೆಸ್ ಸಚಿವ ಬೈರತಿ ಸುರೇಶ್ ಪುತ್ರ ಸಂಜಯ್ ಅವರ ನಿಶ್ಚಿತಾರ್ಥವು ಬೆಂಗಳೂರಿನಲ್ಲಿ ಅದ್ಧೂರಿಯಾಗಿ ನೆರವೇರಿತು.

ಈ ಸಮಾರಂಭದಲ್ಲಿ  ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸೇರಿದಂತೆ ಇಬ್ಬರು ನಾಯಕರ ರಾಜಕೀಯ ಆಪ್ತರು ಭಾಗವಹಿಸಿ ಜೋಡಿಗೆ ಶುಭಹಾರೈಸಿದರು. ಇನ್ನೂ ಸಿಎಂ ಸಿದ್ದರಾಮಯ್ಯ ಮಾತ್ರ ರಾಜ್ಯಪಾಲರು ನಿಶ್ಚಿತಾರ್ಥ ಸಮಾರಂಭದಿಂದ ತೆರಳಿದ ಬಳಿಕ ಆಗಮಿಸಿ, ಜೋಡಿಗೆ ಶುಭಹಾರೈಸಿದರು. ಈ ವೇಳೆ ಬೈರತಿ ಸುರೇಶ್ ಹಾಗೂ ವಿಶ್ವನಾಥ್ ಕುಟುಂಬದ ಜತೆ ಸಿಎಂ ಸಿದ್ದರಾಮಯ್ಯ ಫೋಟೋ ಪೋಸ್ ನೀಡಿದರು.

ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿರುವುದಕ್ಕೆ ಕಾಂಗ್ರೆಸ್ ಭಾರೀ ಆಕ್ರೋಶವನ್ನು ಹೊರಹಾಕಿದೆ. ಅದಲ್ಲದೆ ರಾಜ್ಯಪಾಲರ ನಡೆಯ ವಿರುದ್ಧ ಸಿಎಂ ಸಿದ್ದರಾಮಯ್ಯ ಅವರು ಹಲವು ಪ್ರಶ್ನೆ ಮಾಡಿದ್ದಾರೆ.  

ಸದ್ಯ ರಾಜ್ಯರಾಜಕಾರಣದಲ್ಲಿ ರಾಜ್ಯಪಾಲರ ಕಚೇರಿ ಹಾಗೂ ಕಾಂಗ್ರೆಸ್ ಸರ್ಕಾರದ ನಡುವೆ ಕಿತ್ತಾಟ ಜೋರಾಗಿದೆ.  ಆದರೆ ಇದನ್ನೆಲ್ಲ ಮರೆತು ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಒಟ್ಟಿಗೆ ಊಟ ಸವಿದು, ಕೆಲಹೊತ್ತು ಕೂತು ಮಾತುಕತೆ ನಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments