ಬೆಂಬಲಿಗರ ಅಸಮಾಧಾನ ಸ್ಫೋಟಗೊಳ್ಳುವುದನ್ನು ತಡೆದ ಬಿಎಸ್‌ವೈ

Webdunia
ಭಾನುವಾರ, 7 ಮೇ 2017 (15:06 IST)
ರಾಜ್ಯ ಬಿಜೆಪಿ ಕಾರ್ಯಕಾರಿಣಿಯ ಕೊನೆಯ ದಿನವಾದ ಇಂದು ಬೆಂಬಲಿಗರ ಅಸಮಾಧಾನ ಸ್ಫೋಟಗೊಳ್ಳುವುದನ್ನು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ತಡೆಯುವಲ್ಲಿ ಯಶಸ್ವಿಯಾದರು.
 
ಪಂಡೀತ ದೀನ ದಯಾಳ್ ಜನ್ಮಶತಾಬ್ದಿ ಕುರಿತು ನಿರ್ಣಯ ಮಂಡಿಸಿದ ಬಿಜೆಪಿ ರಾಷ್ಟ್ರೀಯ ಸಂಘಟಕ ಬಿ.ಎಲ್.ಸಂತೋಷ್ ನಿರ್ಣಯ ಮಂಡಿಸಿ, ಶಾಸಕರು, ಸಂಸದರು, ಮುಖಂಡರು 15 ದಿನಗಳ ಕಾಲ ಸ್ವಕ್ಷೇತ್ರವನ್ನು ಬಿಟ್ಟು ಬೇರೆ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸಬೇಕು ಎಂದಾಗ ಕಾರ್ಯಕಾರಿಣಿಯಲ್ಲಿ ಅಸಮಾಧಾನದ ಹೊಗೆ ಎದ್ದಿತು.
 
ನಾವು ಸನ್ಯಾಸಿಗಳಲ್ಲ, 15 ದಿನಗಳ ಕಾಲ ಮನೆಯಿಂದ ಹೊರಗಿದ್ದಲ್ಲಿ ಪತ್ನಿಗೆ ಡಿವೋರ್ಸ್ ಕೊಡಬೇಕಾಗುತ್ತದೆ ಎಂದು ಯಡಿಯೂರಪ್ಪ ಬಣದ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದರು.
 
ಬೆಂಬಲಿಗರು ಅಸಮಾಧಾನಗೊಂಡಿರುವುದನ್ನು ಕಂಡ ಯಡಿಯೂರಪ್ಪ ಕೈ ಸನ್ನೆ ಮಾಡಿ ಸುಮ್ಮನೆ ಕೂರುವಂತೆ ಸೂಚನೆ ನೀಡಿದರು. ಇದರಿಂದ ಅವರ ಬೆಂಬಲಿಗರು ಮೌನವಹಿಸಿದರೂ ಕಾರ್ಯಕಾರಿಣಿಯಲ್ಲಿ ಸಂತೋಷ್ ವಿರುದ್ಧ ಗುಸು ಗುಸು ಮುಂದುವರೆದಿತ್ತು ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಡ್ನಿಯಲ್ಲಿ ನಡೆದ ಮಾರಣಾಂತಿಕ ದಾಳಿ ಬಗ್ಗೆ ಯುಕೆ ಪ್ರಧಾನಿ ಮೊದಲ ರಿಯಾಕ್ಷನ್

2 ವರ್ಷದ ಬಾಲಕಿ ರೇಪ್ ಎಸಗಿ, ಹತ್ಯೆ ಮಾಡಿದವನಿಗೆ ಕ್ಷಮದಾನಕ್ಕೆ ನಿರಾಕರಿಸಿದ ರಾಷ್ಟ್ರಪತಿ

ಆರ್‌ಎಸ್‌ಎಸ್‌, ಬಿಜೆಪಿ ಸಿದ್ಧಾಂತ ದೇಶವನ್ನು ನಾಶಪಡಿಸುತ್ತದೆ: ಮಲ್ಲಿಕಾರ್ಜುನ ಖರ್ಗೆ

ಬಿಜೆಪಿ ಸಾರ್ವಜನಿಕರ ನಂಬಿಕೆಯನ್ನು ಕಳೆದುಕೊಂಡಿದೆ: ಪ್ರಿಯಾಂಕಾ ಗಾಂಧಿ

ಮತ್ತಷ್ಟು ದಾಖಲೆ ಸಮೇತ ಎದುರು ಬರುತ್ತೇವೆ: ಗುಡುಗಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments