Webdunia - Bharat's app for daily news and videos

Install App

ಅಶ್ವತ್ಥ್ ನಾರಾಯಣ​​ ಹೇಳಿಕೆಗೆ C.M ಇಬ್ರಾಹಿಂ ಖಂಡನೆ

Webdunia
ಗುರುವಾರ, 16 ಫೆಬ್ರವರಿ 2023 (17:54 IST)
ಮಂಡ್ಯದ ಸಾತನೂರು ಗ್ರಾಮದಲ್ಲಿ BJP ಕಾರ್ಯಕರ್ತರ ಸಭೆ ವೇಳೆ ಮಾತನಾಡಿದ್ದ ಸಚಿವ ಡಾ. ಅಶ್ವತ್ಥ್​​ ನಾರಾಯಣ, ಟಿಪ್ಪು ರೀತಿ ವಿಪಕ್ಷ ನಾಯಕ ಸಿದ್ದರಾಮಯ್ಯರನ್ನು ಹೊಡೆದು ಹಾಕಿ ಎಂದು ಕಾರ್ಯಕ್ರತರಿಗೆ ಹೇಳಿದ್ರು. ಈ ವಿವಾದಾತ್ಮಕ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಕಿಡಿ ಹೊತ್ತಿಸಿದೆ. ಅಶ್ವತ್ಥ್​​ ನಾರಾಯಣರ ಹೇಳಿಕೆಗೆ ಕಾಂಗ್ರೆಸ್​ ಪಕ್ಷ ಸೇರಿದಂತೆ JDSನಿಂದಲೂ ಆಕ್ಷೇಪ ವ್ಯಕ್ತವಾಗ್ತಿದೆ. ಈ ಹೇಳಿಕೆ ಕುರಿತು ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ JDS ರಾಜ್ಯಾಧ್ಯಕ್ಷ C.M ಇಬ್ರಾಹಿಂ, ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ವಿಧಾನಸಭೆಯಲ್ಲಿ ಟಿಪ್ಪು ಬಗ್ಗೆ ಗುಣಗಾನ ಮಾಡಿದ್ರು. ಅವರನ್ನು ಹಿಡ್ಕೊಂಡು ಹೊಡಿತಿರಾ ನೀವು? ಎಂದು BJPಯವರನ್ನು ಪ್ರಶ್ನಿಸಿದ್ದಾರೆ. ಚುನಾವಣಾ ಬಗ್ಗೆ ಮಾತನಾಡೋಕೆ ಎಷ್ಟು ವಿಷಯಗಳಿದೆ. ರೈತರ ಸಮಸ್ಯೆ, ನೀರಾವರಿ ಯೋಜನೆ, ಶಿಕ್ಷಣ ಹೀಗೆ ಹಲವು ವಿಚಾರಗಳಿದೆ. ಆದರೆ BJP ಅದನ್ನು ಬಿಟ್ಟು ಇಂತಹ ಹೇಳಿಕೆ ಕೊಡ್ತಾರೆ ಎಂದು ಕಿಡಿಕಾರಿದ್ರು. ಸಿದ್ದರಾಮಯ್ಯ ಬೇರೆ ಪಾರ್ಟಿ ಇರಬಹುದು. ಆದ್ರೆ ಅವರು ವಿಪಕ್ಷ ನಾಯಕರು. ಡಿಜಿ ಅವ್ರು ಸುಮುಟೋ ಕೇಸ್ ದಾಖಲಿಸಿದ್ರೆ ಒಂದು ತೂಕ ಬರುತ್ತದೆ ಎಂದು ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments