Select Your Language

Notifications

webdunia
webdunia
webdunia
webdunia

ಜೆಡಿಎಸ್ ಪಕ್ಷ ಸೇರುವತ್ತ ಸಿ.ಎಂ.ಇಬ್ರಾಹಿಂ ಚಿತ್ತ?

ಜೆಡಿಎಸ್ ಪಕ್ಷ ಸೇರುವತ್ತ ಸಿ.ಎಂ.ಇಬ್ರಾಹಿಂ ಚಿತ್ತ?
ಬೆಂಗಳೂರು , ಶನಿವಾರ, 6 ಮೇ 2017 (18:11 IST)
ಪ್ರಕೃತಿ ಚಿಕಿತ್ಸಾಲಯದಲ್ಲಿ ವಿಶ್ರಾಂತಿ ಪಡೆಯುತ್ತಿರುವ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರನ್ನು ಹಿರಿಯ ಕಾಂಗ್ರೆಸ್ ಮುಖಂಡ ಸಿ.ಎಂ.ಇಬ್ರಾಹಿಂ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.
 
ಇಂದು ಬೆಳಿಗ್ಗೆ ಆರೋಗ್ಯ ವಿಚಾರಿಸುವ ನೆಪದಲ್ಲಿ ದೇವೇಗೌಡರನ್ನು ಭೇಟಿ ಮಾಡಿದ ಇಬ್ರಾಹಿಂ, ಒಂದು ವೇಳೆ, ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ನೀಡಿದರೆ ಜೆಡಿಎಸ್ ಪಕ್ಷಕ್ಕೆ ಸೇರುವುದಾಗಿ ಹೇಳಿದ್ದಾರೆ ಎನ್ನಲಾಗಿದೆ.
 
ಮೊದಲು ಕಾಂಗ್ರೆಸ್ ಪಕ್ಷವನ್ನು ತೊರೆದು ಜೆಡಿಎಸ್ ಪಕ್ಷಕ್ಕೆ ಬನ್ನಿ. ಪಕ್ಷವನ್ನು ಅಧಿಕಾರಕ್ಕೆ ತರೋಣ. ನಂತರ ಸೂಕ್ತ ಸ್ಥಾನಮಾನದ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದು ದೇವೇಗೌಡರು ತಿಳಿಸಿದ್ದಾರೆ.
 
ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿಯವರೊಂದಿಗೆ ಚರ್ಚಿಸುತ್ತೇನೆ. ನಂತರ ಮತ್ತೊಂದು ಬಾರಿ ದೇವೇಗೌಡರನ್ನು ಭೇಟಿಯಾಗಿ ಕಾಂಗ್ರೆಸ್ ಪಕ್ಷ ತೊರೆಯುವ ಬಗ್ಗೆ ನಿರ್ಧರಿಸುತ್ತೇನೆ ಎಂದು ಹೇಳಿರುವುದಾಗಿ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಯಡಿಯೂರಪ್ಪ, ಶೋಭಾ ಕರಂದ್ಲಾಜೆ, ಈಶ್ವರಪ್ಪಗೆ ಕೆ.ಬಿ ಶಾಣಪ್ಪ ತರಾಟೆ