Webdunia - Bharat's app for daily news and videos

Install App

ಹೊಸಕೋಟೆಯಲ್ಲಿ ಎಂಟಿಬಿ ನಾಗರಾಜ್ ರನ್ನು ಹೊಗಳಿದ ಸಿಎಂ

Webdunia
ಸೋಮವಾರ, 4 ನವೆಂಬರ್ 2019 (15:02 IST)
ಹೊಸಕೋಟೆ : ಹೊಸಕೋಟೆಯಲ್ಲಿ ನಡೆದ ಕಾರ್ಯಕ್ರಮದ ವೇಳೆ ಸಿಎಂ ಯಡಿಯೂರಪ್ಪ ತಮ್ಮ ಪಕ್ಷದ ನಾಯಕರಾದ ಬಚ್ಚೇಗೌಡ ಹಾಗೂ ಅವರ ಪುತ್ರ ಶರತ್ ಬಚ್ಚೇಗೌಡರ ಹೆಸರು ಹೇಳದೆ ಅವರ ಬದ್ಧ ವೈರಿ ಎಂಟಿಬಿ ನಾಗರಾಜ್ ಬಗ್ಗೆ ಹಾಡಿಹೊಗಳಿದ್ದಾರೆ.




ಇಂದು ಅನರ್ಹ ಶಾಸಕ ಎಂಟಿಬಿ ನಾಗರಾಜ್ ಕ್ಷೇತ್ರವಾದ ಹೊಸಕೋಟೆಗೆ ಭೇಟಿ ನೀಡಿದ ಸಿಎಂ ಯಡಿಯೂರಪ್ಪ ಹಲವು ಕಾಮಗಾರಿಗಳಿಗೆ ಚಾಲನೆ ನೀಡಿದ್ದಾರೆ. ಈ ವೇಳೆ ಕಾರ್ಯಕ್ರಮದಲ್ಲಿ ಜನರನ್ನುದ್ದೇಶಿ ಮಾತನಾಡುವಾಗ ಎಲ್ಲರ ಹೆಸರು ಪ್ರಸ್ತಾಪಿಸಿದ ಸಿಎಂ ಬಚ್ಚೇಗೌಡ ಹಾಗೂ ಅವರ ಪುತ್ರ ಶರತ್ ಬಚ್ಚೇಗೌಡರ ಹೆಸರನ್ನು ಎಲ್ಲಿಯೂ ಪ್ರಸ್ತಾಪ ಮಾಡಲಿಲ್ಲ.


ಅಲ್ಲದೇ ಕ್ಷೇತ್ರದ ಶಾಸಕರಾದ  ಎಂಟಿಬಿ ನಾಗರಾಜ್ ಬಗ್ಗೆ ಮಾತನಾಡಿದ ಸಿಎಂ, ಎಂಟಿಬಿ ಸರಳ ಸಜ್ಜನಿಕೆಯ ರಾಜಕಾರಣಿ. ಕ್ಷೇತ್ರದ ಅಭಿವೃದ್ಧಿಗಾಗಿ ಸಚಿವರಾಗಿದ್ದವರು ರಾಜೀನಾಮೆ ನೀಡಿದ್ದಾರೆ ಎಂದು ಹೊಗಳಿದ್ದಾರೆ. ಅಷ್ಟೇ ಅಲ್ಲದೇ ಅಲ್ಲಿದ್ದ ಅಧಿಕಾರಿಗಳಿಗೆ ಎಂಟಿಬಿ ನಾಗರಾಜ್ ಅವರು ಹೇಳಿದ ಯಾವುದೇ ಕೆಲಸವಿದ್ದರೂ ನನ್ನ ಬಳಿ ಬನ್ನಿ , ಕೂಡಲೇ ಮಂಜೂರು ಮಾಡುತ್ತೇನೆ ಎಂದು ಸೂಚನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments