Select Your Language

Notifications

webdunia
webdunia
webdunia
webdunia

ಜೆಡಿಎಸ್ ಅಭ್ಯರ್ಥಿ ಪರ ಸಂಸದ ಸಿ.ಎಸ್.ಪುಟ್ಟರಾಜು ಅಬ್ಬರದ ಪ್ರಚಾರ

ಜೆಡಿಎಸ್ ಅಭ್ಯರ್ಥಿ ಪರ ಸಂಸದ ಸಿ.ಎಸ್.ಪುಟ್ಟರಾಜು ಅಬ್ಬರದ ಪ್ರಚಾರ
ಮಂಡ್ಯ , ಶುಕ್ರವಾರ, 4 ಮೇ 2018 (13:33 IST)
ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಪರ, ಸಂಸದ ಸಿ.ಎಸ್.ಪುಟ್ಟರಾಜು ಅಬ್ಬರದ ಪ್ರಚಾರ ಮಾಡಿದರು. 
ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ತಾಳಶಾಸನ, ಚಿಕ್ಕಬ್ಯಾಡರಹಳ್ಳಿ, ದೊಡ್ಡಬ್ಯಾಡರಹಳ್ಳಿ, ಚಿಕ್ಕಾಡೆ, ಕಾಳೇನಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಸಿ.ಎಸ್.ಪುಟ್ಟರಾಜು ಮನೆ ಮೆನೆಗೆ ತೆರಳಿ ಮತಯಾಚನೆ ಮಾಡಿದರು. 
 
ಈ ವೇಳೆ ಜೆಡಿಎಸ್ ಮುಖಂಡರು ಪುಟ್ಟರಾಜು ಅವ್ರಿಗೆ ಸಾಥ್ ನೀಡಿದ್ರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಿ.ಎಸ್.ಪುಟ್ಟರಾಜು, ಮಂಡ್ಯ ಜಿಲ್ಲೆ ಜೆಡಿಎಸ್ ಭದ್ರಕೋಟೆಯಾಗಿದ್ದು, ಜಿಲ್ಲೆಯ 7 ಕ್ಷೇತ್ರಗಳಲ್ಲಿ ಮಂಡ್ಯ ಜೆಡಿಎಸ್ ಅಭ್ಯರ್ಥಿಗಳನ್ನ ಗೆಲ್ಲಿಸಲು ಜನ್ರು ತುದಿಗಾಲಲ್ಲಿ ನಿಂತಿದ್ದಾರೆ. 
 
ಮೇಲುಕೋಟೆ ಕ್ಷೇತ್ರದ ಜನ್ರು ಅತ್ಯಂತ ಪ್ರೀತಿ ತೋರಿಸುತ್ತಿದ್ದು, ಈ ಬಾರಿ ನನ್ನನ್ನು ಅತ್ಯಂತ ಹೆಚ್ಚು ಮತಗಳ ಅಂತರದಲ್ಲಿ ಗೆಲ್ಲಿಸಿಕೊಡಲಿದ್ದಾರೆ ಎಂದು ಹೇಳಿದ್ರು.

Share this Story:

Follow Webdunia kannada

ಮುಂದಿನ ಸುದ್ದಿ

ದಲಿತರಿಗೆ ದೇವಸ್ಥಾನ ಪ್ರವೇಶ ನಿಷೇಧ: ಸವರ್ಣೀಯರ ಬಂಧನ