Select Your Language

Notifications

webdunia
webdunia
webdunia
webdunia

ಸಂಪುಟ ವಿಸ್ತರಣೆ ಮಾತ್ರ, ಪುನಾರಚನೆ ಇಲ್ಲ: ಸಿಎಂ

ಸಂಪುಟ ವಿಸ್ತರಣೆ ಮಾತ್ರ, ಪುನಾರಚನೆ ಇಲ್ಲ: ಸಿಎಂ
ಬೆಂಗಳೂರು , ಗುರುವಾರ, 6 ಜುಲೈ 2017 (11:25 IST)
ವಿಧಾನಸಭಾ ಚುನಾವಣೆಗೆ ಕೆಲ ತಿಂಗಳುಗಳು ಮಾತ್ರ ಬಾಕಿ ಉಳಿದಿರುವಾಗ ಸಚಿವ ಸಂಪುಟ ವಿಸ್ತರಣೆ ಕಾಲ ಕೂಡಿಬಂದಂತಿದೆ. ಹೈಕಮಾಂಡ್ ಭೇಟಿ ಬಳಿಕ ಸಂಪುಟ ವಿಸ್ತರಣೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕಳೆದ ಬಾರಿ ವಿಧಾನಪರಿಷತ್ ನಾಮಿನೆಶನ್ ಸಂದರ್ಭ ದೆಹಲಿಗೆ ಹೋಗಿದ್ದಾಗ ರಾಹುಲ್ ಗಾಂಧಿ ಇರಲಿಲ್ಲ. ಇದೀಗ, ಹೈಕಮಾಂಡ್ ಭೇಟಿಗೆ ಅವಕಾಶ ಕೋರಿದ್ದು, ಹೈಕಮಾಂಡ್ ಭೇಟಿ ಬಳಿಕ ವಿಸ್ತರಣೆ ಮಾಡುವುದಾಗಿ ಹೇಳಿದ್ದಾರೆ. ಸಂಪುಟ ವಿಸ್ತರಣೆ ಮೂಲಕ ಖಾಲಿ ಇರುವ ಮೂರು ಸ್ಥಾನಗಳನ್ನ ತುಂಬಲಾಗುತ್ತಿದೆಯಷ್ಟೇ ಪುನಾರಚನೆಯಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.

ಇದೇವೇಳೆ, ಅಮಾವಾಸ್ಯೆ, ಆಷಾಢಮಾಸ ಸಂಪುಟ ವಿಸ್ತರಣೆಗೆ ಅಡ್ಡಿಯಾಗಿಲ್ಲ. ಆ ಬಗ್ಗೆ ನನಗೆ ನಂಬಿಕೆಯೂ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿತರುವ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಅನಿವಾರ್ಯ 4-5 ಕ್ಯೂಸೆಕ್ ನೀರು ಬಿಡಲಾಗುತ್ತಿದೆ. ರೈತರ ಹಿರದೃಷ್ಟಿಯಿಂದ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದ್ದಾರೆ.

 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಅಯೋಧ್ಯಾ ರಾಮ ಮಂದಿರ ನಿರ್ಮಾಣ ಕಾರ್ಯ ಆರಂಭ...?