Select Your Language

Notifications

webdunia
webdunia
webdunia
webdunia

ಇಂದು ರಾಜ್ಯ ಸರ್ಕಾರದ ಸಚಿವ ಸಂಪುಟ ವಿಸ್ತರಣೆ; ಪಕ್ಷೇತರರಿಗೆ ಸಚಿವ ಸ್ಥಾನ ನೀಡಲು ದೋಸ್ತಿ ನಾಯಕರು ನಿರ್ಧಾರ

ಇಂದು ರಾಜ್ಯ ಸರ್ಕಾರದ ಸಚಿವ ಸಂಪುಟ ವಿಸ್ತರಣೆ; ಪಕ್ಷೇತರರಿಗೆ ಸಚಿವ ಸ್ಥಾನ ನೀಡಲು ದೋಸ್ತಿ ನಾಯಕರು ನಿರ್ಧಾರ
ಬೆಂಗಳೂರು , ಶುಕ್ರವಾರ, 14 ಜೂನ್ 2019 (12:23 IST)
ಬೆಂಗಳೂರು : ಇಂದು ಮಧ್ಯಾಹ್ನ ರಾಜ್ಯ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯಾಗುತ್ತಿದ್ದು ಪಕ್ಷೇತರ ಶಾಸಕರಿಗೆ ಮಣೆ ಹಾಕಲು ದೋಸ್ತಿ ನಾಯಕರು ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ.




ಜೆಡಿಎಸ್ ಕೋಟಾದಡಿ ಆರ್.ಶಂಕರ್ ಮತ್ತು ಹೆಚ್.ನಾಗೇಶ್ ಅವರಿಗೆ ಸಚಿವ ಸ್ಥಾನ ನೀಡಲು ನಿರ್ಧಾರ ಮಾಡಲಾಗಿದ್ದು, ಕಾಂಗ್ರೆಸ್ ಕೋಟಾದಡಿ ಒಂದು ಸಚಿವ ಸ್ಥಾನಕ್ಕಾಗಿ ಆರ್.ರಾಮಲಿಂಗಾರೆಡ್ಡಿ ಹಾಗೂ ಬಿ.ಸಿ,ಪಾಟೀಲ್ ಲಾಬಿ ನಡೆಸುತ್ತಿದ್ದಾರೆ ಎನ್ನಲಾಗಿದೆ.


ರಾಣೆಬೆನ್ನೂರು ಕ್ಷೇತ್ರದ ಪಕ್ಷೇತರ ಶಾಸಕ ಆರ್. ಶಂಕರ್ ಕಾಂಗ್ರೆಸ್ ನಾಯಕರ ಸೂಚನೆ ಮೇರೆಗೆ ಪಕ್ಷಕ್ಕೆ ಸೇರ್ಪಡೆಯಾಗಲು ತೀರ್ಮಾನಿಸಿದ್ದು, ಅದರಂತೆ ಶಂಕರ್ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವ ಪಡೆದುಕೊಳ್ಳಲಿದ್ದಾರೆ. ಈ ಮೂಲಕ ಶಂಕರ್ ಅವರಿಗೆ ಸಚಿವ ಸ್ಥಾನ ನೀಡಲಿದ್ದು, ಇಂದು ಮಧ್ಯಾಹ್ನ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.


ಇನ್ನು ಮುಳಬಾಗಿಲು ಪಕ್ಷೇತರ ಶಾಸಕ ನಾಗೇಶ್ ಅವರಿಗೆ ಸಚಿವ ಸ್ಥಾನ ಪಕ್ಕಾ ಆಗಿದ್ದು, ಇಂದು ಪ್ರಮಾನ ವಚನ ಸ್ವೀಕರಿಸಲು ಬರುವಂತೆ ಸಿಎಂಕಚೇರಿಯಿಂದ ಕರೆ ಬಂದಿದೆ ಎ್ನಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಜಿಂದಾಲ್‍ ಗೆ ಭೂಮಿ ಮಾರಾಟ ವಿಚಾರ; ರಾಜ್ಯ ಸರ್ಕಾರದ ವಿರುದ್ಧ ಇಂದಿನಿಂದ ಪ್ರತಿಭಟನೆಗೆ ಮುಂದಾದ ಬಿಜೆಪಿ