Publish Date: Sat, 29 Sep 2018 (19:29 IST)
Updated Date: Sat, 29 Sep 2018 (19:31 IST)
ರಾಜ್ಯ ರಾಜಕೀಯದ ಹಲವು ಬೆಳವಣಿಗೆಗಳ ನಡುವೆಯೆ ಕೊನೆಗೂ ಸಮ್ಮಿಶ್ರ ಸರಕಾರದ ಸಂಪುಟ ವಿಸ್ತರಣೆಗೆ ಉಭಯ ಪಕ್ಷಗಳ ನಾಯಕರು ಮುಂದಾಗಿದ್ದಾರೆ.
ಬಹುದಿನಗಳಿಂದ ನೆನೆಗುದಿಗೆ ಬಿದ್ದಿರುವ ರಾಜ್ಯ ಸಮ್ಮಿಶ್ರ ಸರಕಾರದ ಸಂಪುಟ ವಿಸ್ತರಣೆಗೆ ಅ. 10ರಂದು ಮುಹೂರ್ತ ಫಿಕ್ಸ್ ಆಗಿದೆ ಎಂಬ ಮಾತುಗಳು ಬಲವಾಗಿ ಹರಿದಾಡುತ್ತಿವೆ.
ಸಂಪುಟ ವಿಸ್ತರಣೆಯಲ್ಲಿ ಹೇಗಾದರೂ ಮಾಡಿ ಸ್ಥಾನ ಪಡೆಯಬೇಕೆಂದು ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರು ತಮ್ಮದೇ ಆದ ರೀತಿಯಲ್ಲಿ ಪ್ರಭಾವ ಬೀರಲು ಯತ್ನಿಸುತ್ತಿದ್ದಾರೆ. ಕೊನೆ ಕ್ಷಣದ ಕಸರತ್ತು ನಡೆಸುತ್ತಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ನೀಡಿದೆ.
ಸಂಪುಟ ವಿಸ್ತರಣೆ ಬೆನ್ನಲ್ಲೇ ಕೆಲವು ಸಚಿವರ ಖಾತೆಗಳು ಬದಲಾವಣೆ ಆಗಲಿವೆ.