ನಾಳೆ ಸಂಜೆ 4ಕ್ಕೆ ಸಚಿವ ಸಂಪುಟ ಸಭೆ ನಿಗದಿಪಡಿಸಿದ ರಾಜ್ಯ ಸರ್ಕಾರ

Webdunia
ಬುಧವಾರ, 25 ಅಕ್ಟೋಬರ್ 2017 (17:15 IST)
ಬೆಂಗಳೂರು: ವಿಧಾನಸೌಧದ ವಜ್ರಮಹೋತ್ಸವದಿಂದ ಸರ್ಕಾರ ಅಂತರ ಕಾಯ್ದುಳ್ಳುತ್ತಿದೆ ಎಂಬ ಟೀಕೆಯಿಂದ ತಪ್ಪಿಸಿಕೊಳ್ಳಲು ಇಂದು ನಡೆಯಬೇಕಿದ್ದ ಸಚಿವ ಸಂಪುಟ ಸಭೆಯನ್ನ ನಾಳೆಗೆ ಮುಂದೂಡಿದೆ.

ವಜ್ರಮಹೋತ್ಸವ ಅಂಗವಾಗಿ ಸಂಜೆವರೆಗೆ ವಿವಿಧ ಕಾರ್ಯಕ್ರಮವಿದ್ದರೂ ಇಂದು ಸಂಜೆ 4 ಗಂಟೆಗೆ ಸಂಪುಟ ಸಭೆ ನಿಗದಿಯಾಗಿತ್ತು. ಕೂಡಲೇ ಎಚ್ಚೆತ್ತ ಸರ್ಕಾರ ಆರೋಪದಿಂದ ದೂರ ಸರಿಯಲು ಸಚಿವ ಸಂಪುಟ ಸಭೆಯನ್ನು ನಾಳೆ ಸಂಜೆ 4 ಗಂಟೆಗೆ ಮುಂದೂಡಿದೆ.

ವಿಧಾನಸೌಧ ವಜ್ರಮಹೋತ್ಸವ ಕಾರ್ಯಕ್ರಮ ಮಾಡುವ ಕುರಿತು ಘೋಷಣೆಯಾದಾಗಿನಿಂದಲೂ ಒಂದಿಲ್ಲೊಂದು ವಿವಾದ ಸೃಷ್ಟಿಯಾಗಿತ್ತು. ವಜ್ರಮಹೋತ್ಸವಕ್ಕೆ 27 ಕೋಟಿ ರೂ. ವೆಚ್ಚ ಮಾಡಲು ನಿರ್ಧರಿಸಿ, ನಂತರ 10 ಕೋಟಿ ರೂ.ಗೆ ಕಾರ್ಯಕ್ರಮ ಮಾಡಲು ತೀರ್ಮಾನಿಸಲಾಯಿತು. ಅಂದಿನಿಂದ ಸರ್ಕಾರ ವಜ್ರಮಹೋತ್ಸವದಿಂದ ಅಂತರ ಕಾಯ್ದುಕೊಂಡಿದೆ ಎಂದು ಹೇಳಲಾಗಿತ್ತು. ಹೀಗಾಗಿ ರಾಷ್ಟ್ರಪತಿ ಭಾಷಣ ಮುಗಿದ ಬಳಿಕ ವಿಧಾನಸೌಧದ ಕಾರ್ಯಚಟುವಟಿಕೆ ಎಂದಿನಂತೆ ನಡೆಸಲು ಉದ್ದೇಶಿಸಲಾಗಿತ್ತು. ಆದರೆ ಹಲವರು ಟೀಕೆ ಬಂದ ಹಿನ್ನೆಲೆಯಲ್ಲಿ ಸಂಪುಟ ಸಭೆಯನ್ನು ನಾಳೆಗೆ ಮುಂದೂಡಲಾಗಿದೆ ಎಂದು ಹೇಳಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ, ಪಂಜಾಬ್, ಯುಪಿಯಲ್ಲಿ ತೀವ್ರ ಹೀಟ್‌ವೇವ್ ಎಚ್ಚರಿಕೆ

ರಾಹುಲ್ ಗಾಂಧಿ ಒಬ್ಬ ಪಾಕಿಸ್ತಾನಿ ಏಜೆಂಟ್: ನಿತೇಶ್ ರಾಣೆ

ನಟ ಧರ್ಮೇಂದ್ರರಿಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

ಅಂಬೆನಾಲಿ ಘಾಟ್‌ನಲ್ಲಿ ಸಾವಿರ ಅಡಿ ಆಳದ ಕಣಿವೆಗೆ ಉರುಳಿದ ಕಾರು: ಎಂಟು ಯುವಕರು ದಾರುಣ ಸಾವು

ಬೆಳ್ತಂಗಡಿ ತಾಲ್ಲೂಕಿನ ಟ್ರೆಕ್ಕಿಂಗ್ ತಾಣಕ್ಕೆ ಹೋಗುವ ಪ್ಲಾನ್ ಮಾಡಿದ್ದವರಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments