Webdunia - Bharat's app for daily news and videos

Install App

‘ಮೀಸಲಾತಿ ಹೆಚ್ಚಳಕ್ಕೆ ಸಂಪುಟ ಸಭೆ ಒಪ್ಪಿಗೆ’

Webdunia
ಗುರುವಾರ, 20 ಅಕ್ಟೋಬರ್ 2022 (17:59 IST)
SC,ST ಮೀಸಲಾತಿ ಹೆಚ್ಚಳ ವಿಚಾರಕ್ಕೆ ಕಾನೂನು ಸಚಿವ ಮಾಧುಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ಬಳಿಕ ಮಾತನಾಡಿದ ಅವರು, SC ಮೀಸಲಾತಿಯನ್ನು 15 ರಿಂದ 17 ಹೆಚ್ಚಳ ಹಾಗೂ ST ಮೀಸಲಾತಿ 3 ರಿಂದ 7% ಹೆಚ್ಚಳ ಮಾಡಲಾಗಿದೆ. ಮೀಸಲಾತಿ ಬಿಗಿಗೊಳಿಸಲು ಸುಗ್ರೀವಾಜ್ಙೆ ತರಲು ಸಂಪುಟ ಸಭೆ ಒಪ್ಪಿದೆ. ಇದನ್ನ ರಾಜ್ಯಪಾಲರಿಗೆ ಕಳಿಸಲು ನಿರ್ಧರಿಸಿದ್ದೇವೆ. ಆರ್ಟಿಕಲ್ 14, 15, 35 ಸೇರಿ ಎಲ್ಲವನ್ನ ಪರಿಶೀಲಿಸಿದ್ದೇವೆ. ನಾವು ಹಾಗೆಯೇ ಅನುಷ್ಟಾನಕ್ಕೆ ತರಲು ಮುಂದಾಗಿದ್ವಿ. ಕೋರ್ಟ್​ನಲ್ಲಿ ಚಾಲೆಂಜ್ ಆಗಬಹುದು. ಹಾಗಾಗಿ ಸುಗ್ರೀವಾಜ್ಙೆ ಮೂಲಕವೇ ತರಲು ಹೊರಟಿದ್ದೇವೆ. ರಾಜ್ಯಪಾಲರಿಗೆ ಸುಗ್ರೀವಾಜ್ಙೆ ಕಳಿಸುತ್ತೇವೆ ಎಂದರು. ನಂತರ ಕುಡಿಯುವ ನೀರಿನ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಒಪ್ಪಿಗೆ ಸಿಕ್ಕಿದೆ. ಬಾನಗುಂದಿ 260 ಹಳ್ಳಿಗಳಿಗೆ 260 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಒಟ್ಟು 24 ಯೋಜನೆಗಳಿಗೆ ಸಂಪುಟ ಅಸ್ತು ಎಂದಿದೆ. ಹಿರಿಯೂರಿನ 300 ವಸತಿಗಳಿಗೆ ಆಡಳಿತಾತ್ಮಕ ಅನುಮೋದನೆ ಸಿಕ್ಕಿದೆ. ಒಟ್ಟು 592 ಕೋಟಿ ಅನುದಾನ ನೀಡಲಾಗಿದೆ ಎಂದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Rains: ರಾಜ್ಯಾದ್ಯಂತ ಮಳೆ ಹೆಚ್ಚಾಗಲು ಇದೇ ಕಾರಣ

ನಮ್ಮ ಮೆಟ್ರೋ ಹಳದಿ ಲೈನ್ ನಲ್ಲಿ ಇದುವರೆಗೆ ಪ್ರಯಾಣಿಸಿದವರೆಷ್ಟು, ಸಿಎಂ ಮಾಹಿತಿ ಇಲ್ಲಿದೆ

ಬಿಕ್ಲು ಶಿವು ಮರ್ಡರ್ ಪ್ರಕರಣದಲ್ಲಿ ಶಾಸಕ ಭೈರತಿ ಬಸವರಾಜ್ ಗೆ ರಿಲೀಫ್

ಗವಿಸಿದ್ದಪ್ಪ ಕುಟುಂಬದವರಿಗೂ 50 ಲಕ್ಷ ರೂ ಕೊಡಿ: ವಿಜಯೇಂದ್ರ ಆಗ್ರಹ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

ಮುಂದಿನ ಸುದ್ದಿ
Show comments