ಕಳಂಕಿತ ನಾಲ್ಕು ಸಚಿವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ.
ಕಲಬುರಗಿಯಲ್ಲಿ ಮೊದಲ ಬಾರಿಗೆ ನಡೆಯುತ್ತಿರುವ ಸಚಿವ ಸಂಪುಟ ಸಭೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಎಲ್ಲಾ ಖಾತೆಗಳ ಸಚಿವರು ಉಪಸ್ಥಿತರಿದ್ದಾರೆ.
ಹಗರಣಗಳಲ್ಲಿ ಭಾಗಿಯಾದ ಸಚಿವರನ್ನು ಸಂಪುಟದಿಂದ ಕೈಬಿಡಬೇಕು ಎಂದು ಒತ್ತಾಯಿಸಿ ನೂರಾರು ಕಾರ್ಯಕರ್ತರು ವಿಧಾನಸೌಧಕ್ಕೆ ಮುತ್ತಿಗೆ ಹಾಕಿದ್ದರಿಂದ ಪ್ರತಿಭಟನಾಕಾರರನ್ನು ತಡೆಯಲು ಪೊಲೀಸರು ಹರಸಾಹಸ ಪಡಬೇಕಾಯಿತು.
ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಹಲವರನ್ನು ಪೊಲೀಸರು ಬಂಧಿಸಿ ವಶಕ್ಕೆ ತೆಗೆದುಕೊಂಡಿದ್ದಾರೆ.