Webdunia - Bharat's app for daily news and videos

Install App

ಎಚ್‌ಡಿಕೆ ಪರ ಸುಮಲತಾ ಮಂಡ್ಯದಲ್ಲಿ ಪ್ರಚಾರ: ವಿಪಕ್ಷ ನಾಯಕ ಆರ್‌.ಅಶೋಕ್

Sampriya
ಶುಕ್ರವಾರ, 12 ಏಪ್ರಿಲ್ 2024 (17:06 IST)
ಬೆಂಗಳೂರು: ಈಚೆಗೆ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ನಮ್ಮ ಪಕ್ಷದ ಸ್ಟಾರ್ ಪ್ರಚಾರಕರು ಎಂದು ವಿಪಕ್ಷ ನಾಯಕ ಆರ್‌.ಅಶೋಕ್ ಹೇಳಿದರು.

ಮಂಡ್ಯ ನಗರದ ಹೊರ ವಲಯದಲ್ಲಿರುವ ಖಾಸಗಿ ಹೊಟೇಲ್‌ನಲ್ಲಿ ಬಿಜೆಪಿ-ಜೆಡಿಎಸ್‌ ಕಾರ್ಯಕರ್ತರ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಸಂಸದೆ ಸುಮಲತಾ ಅಂಬರೀಶ್ ಅವರು ನಮ್ಮ ಪಕ್ಷದ ಸ್ಟಾರ್ ಕ್ಯಾಂಪೇನರ್ ಆಗಿದ್ದಾರೆ. ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಯಾವಾಗ ದಿನಾಂಕ ಗೊತ್ತುಪಡಿಸುತ್ತಾರೋ ಅಂದು ಸುಮಲತಾ ಮಂಡ್ಯದಲ್ಲಿ ಪ್ರಚಾರ ನಡೆಸಲಿದ್ದಾರೆ ಎಂದರು.

ಕೇವಲ ಮಂಡ್ಯ ಮಾತ್ರವಲ್ಲದೆ, ಮೈಸೂರು, ಬೆಂಗಳೂರು, ಚಾಮರಾಜನಗರ ಸೇರಿದಂತೆ ಹಲವೆಡೆ ಶುದ್ಧ ಮನಸ್ಸಿನಿಂದ ಪ್ರಚಾರ ಮಾಡಲಿದ್ದಾರೆ. ಜೊತೆಗೆ ಮೋದಿಯವರ ಸಮಾವೇಶದಲ್ಲೂ ವೇದಿಕೆ ಮೇಲೆ ಇರಲಿದ್ದಾರೆ ಎಂದು ಹೇಳಿದರು.

ಜೆಡಿಎಸ್ ಬಿಜೆಪಿ ಮೈತ್ರಿ  ಅಭ್ಯರ್ಥಿ ಎಚ್‌ ಡಿ ಕುಮಾರಸ್ವಾಮಿ ಹಾಗೂ ಸುಮಲತಾ ಅಂಬರೀಶ್ ಅವರ ಮಧ್ಯೆ ಈ ಹಿಂದಿನ ಲೋಕಸಭೆ ಚುನಾವಣೆ ವೇಳೆ ಮಾತಿನ ಚಕಮಕಿ ಜೋರಾಗಿ ನಡೆದಿತ್ತು.

ಇನ್ನೂ ಈ ಬಾರಿ ಮಂಡ್ಯ ಲೋಕಸಭೆ ಟಿಕೆಟ್ ಮಿಸ್ ಆಗಿದ್ದರಿಂದ ಸುಮಲತಾ ಮುನಿಸಿಕೊಂಡಿದ್ದರು. ಆದರೆ ಮೋದಿ ಗೆಲುವಿಗಾಗಿ ನಾನು ಈ ಬಾರಿ ಚುನಾವಣೆಯಿಂದ ಹಿಂದೆ ಸರಿಯುತ್ತೇನೆ ಎಂದು ಹೇಳಿ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಂಡರು. ಅದಲ್ಲದೆ ಕುಮಾರಸ್ವಾಮಿ ಜತೆ ಮಾತುಕತೆ ನಡೆಸಿ, ಬೆಂಬಲ ಸೂಚಿಸಿದ್ದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments