Daily Horoscope

ಸರಕಾರ ಬದಲಾವಣೆ ಸಾಧ್ಯವಿಲ್ಲ ಎಂದ ಸಂಸದ!

Webdunia
ಬುಧವಾರ, 16 ಜನವರಿ 2019 (14:07 IST)
ಒಂದು ಪಕ್ಷದ ಚುನಾಯಿತ ಪ್ರತಿನಿಧಿಗಳಿಗೆ ಆಸೆ- ಆಮಿಷಗಳನ್ನು ಒಡ್ಡುವುದು ಸರಿಯಲ್ಲ. ನಮ್ಮ‌ ಪಕ್ಷದ ಜನಪ್ರತಿನಿಧಿಗಳು ಇಂತಹ ಆಮಿಷಗಳಿಗೆ ಬಲಿಯಾಗುವುದಿಲ್ಲ. ಯಾವುದೇ ಕಾರಣಕ್ಕೂ ಸರಕಾರ ಬದಲಾಗುವುದಿಲ್ಲ. ಹೀಗಂತ ಸಂಸದರೊಬ್ಬರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.  

ಚಾಮರಾಜನಗರದಲ್ಲಿ ಸಂಸದ ಆರ್.ದೃವನಾರಾಯಣ್ ಹೇಳಿಕೆ ನೀಡಿದ್ದು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಒಳ್ಳೆಯ ಬೆಳವಣಿಗೆಯಲ್ಲ. 4, 5 ಜನ ಯಾರು ಹೊರಗೆ ಹೋಗಿದ್ದಾರೆಯೋ ಅವರೆ ಅತೃಪ್ತ ಶಾಸಕರು. ಅವರನ್ನ ಈಗಾಗಲೇ ಮನವೊಲಿಸುವ ಪ್ರಯತ್ನ ನಡೆಯುತ್ತಿದೆ ಎಂದರು.

ಎಲ್ಲರಿಗೂ ಮಂತ್ರಿಯಾಗುವ ಆಸೆ ಇದ್ದೇ ಇರುತ್ತದೆ. ಆದರೆ ಕಾಂಗ್ರೆಸ್ ನಲ್ಲಿ ಆಕಾಂಕ್ಷಿಗಳು ಜಾಸ್ತಿ ಇದ್ದಾರೆ ಅಷ್ಟೇ. 
ಕೆಲವು ಶಾಸಕರಿಗೆ ನಿಗಮ ಮಂಡಳಿಗಳು ಇದ್ದಾವೆ.  ಹಾಗಾಗಿ ಸರ್ಕಾರ ಸುಭದ್ರವಾಗಿದೆ. ಯಾವುದೇ ಕಾರಣಕ್ಕೂ ಬದಲಾವಣೆ ಆಗೋದಿಲ್ಲ ಎಂದು ಹೇಳಿದರು.  

ಸರಕಾರ ಉರುಳಿಸುವ ಇಂತಹ ಪ್ರಯತ್ನಗಳನ್ನು ಬಿಜೆಪಿಯವರು ಮಾಡುವುದರಿಂದ ಅವರ ಪಕ್ಷಕ್ಕೇ ಸಮಸ್ಯೆಯಾಗಲಿದೆ ಎಂದು ತಿಳಿಸಿದರು.



ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments