Webdunia - Bharat's app for daily news and videos

Install App

ಸರಕಾರ ಬದಲಾವಣೆ ಸಾಧ್ಯವಿಲ್ಲ ಎಂದ ಸಂಸದ!

Webdunia
ಬುಧವಾರ, 16 ಜನವರಿ 2019 (14:07 IST)
ಒಂದು ಪಕ್ಷದ ಚುನಾಯಿತ ಪ್ರತಿನಿಧಿಗಳಿಗೆ ಆಸೆ- ಆಮಿಷಗಳನ್ನು ಒಡ್ಡುವುದು ಸರಿಯಲ್ಲ. ನಮ್ಮ‌ ಪಕ್ಷದ ಜನಪ್ರತಿನಿಧಿಗಳು ಇಂತಹ ಆಮಿಷಗಳಿಗೆ ಬಲಿಯಾಗುವುದಿಲ್ಲ. ಯಾವುದೇ ಕಾರಣಕ್ಕೂ ಸರಕಾರ ಬದಲಾಗುವುದಿಲ್ಲ. ಹೀಗಂತ ಸಂಸದರೊಬ್ಬರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.  

ಚಾಮರಾಜನಗರದಲ್ಲಿ ಸಂಸದ ಆರ್.ದೃವನಾರಾಯಣ್ ಹೇಳಿಕೆ ನೀಡಿದ್ದು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಒಳ್ಳೆಯ ಬೆಳವಣಿಗೆಯಲ್ಲ. 4, 5 ಜನ ಯಾರು ಹೊರಗೆ ಹೋಗಿದ್ದಾರೆಯೋ ಅವರೆ ಅತೃಪ್ತ ಶಾಸಕರು. ಅವರನ್ನ ಈಗಾಗಲೇ ಮನವೊಲಿಸುವ ಪ್ರಯತ್ನ ನಡೆಯುತ್ತಿದೆ ಎಂದರು.

ಎಲ್ಲರಿಗೂ ಮಂತ್ರಿಯಾಗುವ ಆಸೆ ಇದ್ದೇ ಇರುತ್ತದೆ. ಆದರೆ ಕಾಂಗ್ರೆಸ್ ನಲ್ಲಿ ಆಕಾಂಕ್ಷಿಗಳು ಜಾಸ್ತಿ ಇದ್ದಾರೆ ಅಷ್ಟೇ. 
ಕೆಲವು ಶಾಸಕರಿಗೆ ನಿಗಮ ಮಂಡಳಿಗಳು ಇದ್ದಾವೆ.  ಹಾಗಾಗಿ ಸರ್ಕಾರ ಸುಭದ್ರವಾಗಿದೆ. ಯಾವುದೇ ಕಾರಣಕ್ಕೂ ಬದಲಾವಣೆ ಆಗೋದಿಲ್ಲ ಎಂದು ಹೇಳಿದರು.  

ಸರಕಾರ ಉರುಳಿಸುವ ಇಂತಹ ಪ್ರಯತ್ನಗಳನ್ನು ಬಿಜೆಪಿಯವರು ಮಾಡುವುದರಿಂದ ಅವರ ಪಕ್ಷಕ್ಕೇ ಸಮಸ್ಯೆಯಾಗಲಿದೆ ಎಂದು ತಿಳಿಸಿದರು.



ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments