ಆರ್.ಎಸ್.ಎಸ್ ಕಾರ್ಯಕ್ರಮಕ್ಕೆ ಹೋಗಲ್ಲ : ನಾಗತಿಹಳ್ಳಿ ಸ್ಪಷ್ಟನೆ

Webdunia
ಶುಕ್ರವಾರ, 30 ಜೂನ್ 2023 (20:32 IST)
ಪ್ರಗತಿಪರ ಗುಂಪಿನಲ್ಲಿ ಗುರುತಿಸಿಕೊಂಡಿರುವ ಸಿನಿಮಾ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಆರ್.ಆರ್.ಎಸ್ ಸಂಘಟನೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಾಗಿ ಆಗುತ್ತಿರುವುದು ಸೋಷಿಯಲ್ ಮೀಡಿಯಾದಲ್ಲಿ ಚರ್ಚೆಗೆ ಗ್ರಾಸವಾಗಿತ್ತು.

ಆರ್.ಎಸ್.ಎಸ್ ಸಂಘಟನೆಯನ್ನು ವಿರೋಧಿಸುತ್ತಾ ಬಂದಿರುವ ಬಳಗದಲ್ಲಿದ್ದ ನಾಗತಿಹಳ್ಳಿ ಚಂದ್ರಶೇಖರ್ ಅದು ಹೇಗೆ ಕಾರ್ಯಕ್ರಮವನ್ನು ಒಪ್ಪಿಕೊಂಡರು ಎನ್ನುವುದು ಕೆಲವರ ಪ್ರಶ್ನೆಯಾಗಿತ್ತು.
ಬೆಂಗಳೂರಿನ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಶಂಕರಪುರ ಭಾಗ ಜುಲೈ 16ರಂದು ‘ಶ್ರೀ ಗುರು ಪೂಜಾ ಉತ್ಸವ’ವನ್ನು ಆಯೋಜನೆ ಮಾಡಿತ್ತು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಾಗತಿಹಳ್ಳಿ ಚಂದ್ರಶೇಖರ್ ವಹಿಸಿಕೊಳ್ಳಲಿದ್ದಾರೆ ಎಂದೂ, ಅಖಿಲ ಭಾರತ ಗ್ರಾಮ ವಿಕಾಸ ಸಂಯೋಜಕ ಶ್ರೀಗುರುರಾಜ್ ಅಂದಿನ ಸಮಾರಂಭದಲ್ಲಿ ಭಾಗಿಯಾಲಿದ್ದಾರೆ ಎಂದು ಆಮಂತ್ರಣ ಪತ್ರಿಕೆಯನ್ನು ಮುದ್ರಿಸಲಾಗಿತ್ತು. ಈ ಆಹ್ವಾನ ಪತ್ರಿಕೆ ವೈರಲ್ ಆಗಿತ್ತು.

ನಾಗತಿಹಳ್ಳಿ ಚಂದ್ರಶೇಖರ್ ಇತ್ತೀಚೆಗೆ ಬದಲಾಗಿದ್ದಾರೆ ಎಂದು ಕೆಲವರು ಟೀಕೆ ಮಾಡಿದ್ದರೆ, ಇನ್ನೂ ಕೆಲವರು ಅವರು ಬಿಜೆಪಿ ಮತ್ತು ಆರ್.ಎಸ್.ಎಸ್ ಜೊತೆ ಗುರುತಿಸಿಕೊಂಡು ತುಂಬಾ ದಿನವಾಗಿದೆ ಎಂದು ಹಲವರು ಕಾಮೆಂಟ್ ಮಾಡಿದ್ದರು. ನಾಗ್ತಿ ಮೇಷ್ಟ್ರ ಮೇಲೆ ನೆಗೆಟಿವ್ ಕಾಮೆಂಟ್ ಬಂದಿದ್ದೇ ಹೆಚ್ಚಿತ್ತು. ಹಾಗಾಗಿ ನಾಗತಿಹಳ್ಳಿಯವರು ಇದಕ್ಕೆ ಸ್ಪಷ್ಟನೆಯನ್ನು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಎಂಕೆ ನಿರ್ಗಮನಕ್ಕೆ ಕ್ಷಣಗಣನೆ ಆರಂಭ, ಎನ್‌ಡಿಎ ಸರ್ಕಾರ ರಚನೆ: ಪ್ರಧಾನಿ ನರೇಂದ್ರ ಮೋದಿ

ಪವಿತ್ರಾ ಗೌಡಗೆ ಮನೆಯೂಟಕ್ಕೆ ಕೋರ್ಟ್ ನಿರಾಕರಣೆ, ಅಲೋಕ್ ಕುಮಾರ್ ಅಚ್ಚರಿ ಹೇಳಿಕೆ

ಮಕ್ಕಳ ಸುರಕ್ಷತೆಗಾಗಿ ಬೆಳ್ಳಂಬೆಳ್ಳಗ್ಗೆ ಡ್ಯೂಟಿಗಿಳಿದ ಖಾಕಿ, ಸಿಕ್ಕಿಬಿದ್ದವರಾರು ಗೊತ್ತಾ

ಇದೆಲ್ಲಾ ಕಾಂಗ್ರೆಸ್‌ನವರ ರಾಜಕೀಯ ನಾಟಕ: ಎಚ್‌ಡಿ ಕುಮಾರಸ್ವಾಮಿ

ಚುನಾವಣೆಯಲ್ಲಿ ಬಿಜೆಪಿಗೆ ಅಧಿಕಾರ ಕೊಡಿ, ಶಬರಿಮಲೆ ಚಿನ್ನ ಕಳವು ತನಿಖೆ, ಮೋದಿ

ಮುಂದಿನ ಸುದ್ದಿ
Show comments