Webdunia - Bharat's app for daily news and videos

Install App

ಯಾವುದೇ ಕಾರಣಕ್ಕೂ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲ್ಲ: ಸಿದ್ದರಾಮಯ್ಯ

Sampriya
ಮಂಗಳವಾರ, 1 ಅಕ್ಟೋಬರ್ 2024 (16:59 IST)
ಬೆಂಗಳೂರು: ಮುಡಾ ಹಗರಣದಲ್ಲಿ ಹಣಕಾಸು ವರ್ಗಾವಣೆ ಆಗಿಲ್ಲ. ನನ್ನ ಪಾತ್ರ ಈ ಪ್ರಕರಣದಲ್ಲಿ ಏನೂ ಇಲ್ಲವಾಗಿದ್ದು, ಆತ್ಮಸಾಕ್ಷಿಗೆ ಅನುಗುಣವಾಗಿ ಕೆಲಸ ಮಾಡಿದ್ದೇನೆ. ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡೋದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.

ಮುಡಾ ಸೈಟ್ ವಾಪಾಸ್ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಈ ತೀರ್ಮಾನವನ್ನು ನನ್ನ ಪತ್ನಿ ಸ್ವತಂತ್ರವಾಗಿ ಕೈಗೊಂಡಿದ್ದಾರೆ. ಸೈಟ್ ವಾಪಾಸ್ ಕೊಡುವ ತೀರ್ಮಾನದ ಬಗ್ಗೆ ನನ್ನ ಜತೆ ಚರ್ಚೆ ನಡೆಸಿಲ್ಲ. ಅವರ ಸಹೋದರ ನೀಡಿದ ಜಮೀನು ಅದು. ಮುಡಾದವರು ಅವರನ್ನು ಸ್ವಾಧೀನಕ್ಕೆ ಪಡೆದುಕೊಂಡು ಸೈಟ್ ಮಾಡಿ ಬೇರೆಯವರಿಗೆ ಹಂಚಿಕೆ ಮಾಡಿದ್ದರು. ಬದಲಿ ನಿವೇಶನವಾಗಿ ವಿಜಯ ನಗರದಲ್ಲಿ ನೀಡಿದ್ದರು. ಮುಡಾಗೆ ನಾವೇನು ಅಲ್ಲೇ ಕೊಡಿ ಎಂದು ಕೇಳಿರಲಿಲ್ಲ. ಅವರೇ ವಿಜಯನಗರದಲ್ಲಿ ಕೊಟ್ಟಿದ್ದರು. ಇದರಿಂದ ನನ್ನ ಯಜಮಾನರಿಗೆ ರಾಜಕೀಯ ತೇಜೋವಧೆ ಆಗುತ್ತಿದೆ ಎಂದು ಸೈಟ್ ವಾಪಾಸ್ ನೀಡಲು ಮುಂದಾಗಿದ್ದಾರೆ ಎಂದು ತಿಳಿಸಿದರು.

ಸೈಟ್ ವಾಪಸ್ ನೀಡಿ ತಪ್ಪು ಒಪ್ಪಿಕೊಂಡ ಹಾಗಲ್ವ ಎಂಬ ಬಿಜೆಪಿ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ಹೇಗೆ ತಪ್ಪು ಒಪ್ಪಿದಂತಾಗುತ್ತದೆ. ಈ ನಿರ್ಧಾರವನ್ನು ನನ್ನ ಪತ್ನಿ ಮನನೊಂದು ತೆಗೆದುಕೊಂಡಿರುವ ನಿರ್ಧಾರ. ಬಿಜೆಪಿಗರು ಸುಳ್ಳು ಹೇಳೋದರಲ್ಲಿ ನಿಸ್ಸೀಮರು. ರಾಜೀನಾಮೆ ಕೊಟ್ಟರೆ ಮುಗಿದು ಹೋಗುತ್ತಾ? ನಾನು ತಪ್ಪೇ ಮಾಡಿಲ್ಲವಲ್ಲ ಎಂದು ಹರಿಹಾಯ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Dehli Airport: ಭಾರೀ ಮಳೆಗೆ ಸೋರುತ್ತಿದೆ ಛಾವಣಿ, Video Viral

ಮಗನ ಇನ್ನೊಂದು ಸಂಬಂಧ ತಿಳಿಯುತ್ತಿದ್ದ ಹಾಗೇ RJDಯಿಂದ ಉಚ್ಛಾಟಿಸಿದ ಲಾಲು

18 ಬಿಜೆಪಿ ಶಾಸಕರ ಅಮಾನತು ವಾಪಾಸ್ ಪಡೆಯುವ ಮುನ್ಸೂಚನೆ ಕೊಟ್ಟ ಸ್ಪೀಕರ್ ಯುಟಿ ಖಾದರ್‌

ಆಪರೇಷನ್ ಸಿಂಧೂರ್‌ ಕೇವಲ ಮಿಲಿಟರಿ ಕಾರ್ಯಾಚರಣೆಯಲ್ಲ, ಭಾರತದ ಪ್ರತಿಬಿಂಬ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ

ನಾಲ್ಕನೇ ಅತಿದೊಡ್ಡ ಆರ್ಥಿಕತೆಯ ರಾಷ್ಟ್ರವಾಗಿ ಭಾರತ: ಐದನೇ ಸ್ಥಾನಕ್ಕೆ ಜಾರಿದ ಜಪಾನ್‌

ಮುಂದಿನ ಸುದ್ದಿ
Show comments