Webdunia - Bharat's app for daily news and videos

Install App

ಯಾವುದೇ ಕಾರಣಕ್ಕೂ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲ್ಲ: ಸಿದ್ದರಾಮಯ್ಯ

Sampriya
ಮಂಗಳವಾರ, 1 ಅಕ್ಟೋಬರ್ 2024 (16:59 IST)
ಬೆಂಗಳೂರು: ಮುಡಾ ಹಗರಣದಲ್ಲಿ ಹಣಕಾಸು ವರ್ಗಾವಣೆ ಆಗಿಲ್ಲ. ನನ್ನ ಪಾತ್ರ ಈ ಪ್ರಕರಣದಲ್ಲಿ ಏನೂ ಇಲ್ಲವಾಗಿದ್ದು, ಆತ್ಮಸಾಕ್ಷಿಗೆ ಅನುಗುಣವಾಗಿ ಕೆಲಸ ಮಾಡಿದ್ದೇನೆ. ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡೋದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.

ಮುಡಾ ಸೈಟ್ ವಾಪಾಸ್ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಈ ತೀರ್ಮಾನವನ್ನು ನನ್ನ ಪತ್ನಿ ಸ್ವತಂತ್ರವಾಗಿ ಕೈಗೊಂಡಿದ್ದಾರೆ. ಸೈಟ್ ವಾಪಾಸ್ ಕೊಡುವ ತೀರ್ಮಾನದ ಬಗ್ಗೆ ನನ್ನ ಜತೆ ಚರ್ಚೆ ನಡೆಸಿಲ್ಲ. ಅವರ ಸಹೋದರ ನೀಡಿದ ಜಮೀನು ಅದು. ಮುಡಾದವರು ಅವರನ್ನು ಸ್ವಾಧೀನಕ್ಕೆ ಪಡೆದುಕೊಂಡು ಸೈಟ್ ಮಾಡಿ ಬೇರೆಯವರಿಗೆ ಹಂಚಿಕೆ ಮಾಡಿದ್ದರು. ಬದಲಿ ನಿವೇಶನವಾಗಿ ವಿಜಯ ನಗರದಲ್ಲಿ ನೀಡಿದ್ದರು. ಮುಡಾಗೆ ನಾವೇನು ಅಲ್ಲೇ ಕೊಡಿ ಎಂದು ಕೇಳಿರಲಿಲ್ಲ. ಅವರೇ ವಿಜಯನಗರದಲ್ಲಿ ಕೊಟ್ಟಿದ್ದರು. ಇದರಿಂದ ನನ್ನ ಯಜಮಾನರಿಗೆ ರಾಜಕೀಯ ತೇಜೋವಧೆ ಆಗುತ್ತಿದೆ ಎಂದು ಸೈಟ್ ವಾಪಾಸ್ ನೀಡಲು ಮುಂದಾಗಿದ್ದಾರೆ ಎಂದು ತಿಳಿಸಿದರು.

ಸೈಟ್ ವಾಪಸ್ ನೀಡಿ ತಪ್ಪು ಒಪ್ಪಿಕೊಂಡ ಹಾಗಲ್ವ ಎಂಬ ಬಿಜೆಪಿ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ಹೇಗೆ ತಪ್ಪು ಒಪ್ಪಿದಂತಾಗುತ್ತದೆ. ಈ ನಿರ್ಧಾರವನ್ನು ನನ್ನ ಪತ್ನಿ ಮನನೊಂದು ತೆಗೆದುಕೊಂಡಿರುವ ನಿರ್ಧಾರ. ಬಿಜೆಪಿಗರು ಸುಳ್ಳು ಹೇಳೋದರಲ್ಲಿ ನಿಸ್ಸೀಮರು. ರಾಜೀನಾಮೆ ಕೊಟ್ಟರೆ ಮುಗಿದು ಹೋಗುತ್ತಾ? ನಾನು ತಪ್ಪೇ ಮಾಡಿಲ್ಲವಲ್ಲ ಎಂದು ಹರಿಹಾಯ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ನೈರುತ್ಯ ರೈಲ್ವೆ ವ್ಯಾಪ್ತಿಗೆ: ಕೇರಳ ಅಡ್ಡಗಾಲು ಬೆನ್ನನ್ನೇ ಡಿಕೆ ಶಿವಕುಮಾರ್‌ಗೆ ಬ್ರಿಜೇಶ್ ಚೌಟ ಪತ್ರ

ಮೊಬೈಲ್ ಕೊಡಲಿಲ್ಲವೆಂದು ಸಹೋದರಿಯನ್ನು ಕೊಂದಿದ್ದ ತಮ್ಮನಿಗೆ 4ವರ್ಷದ ಬಳಿಕ ತೀರ್ಪು ಪ್ರಕಟ

ರಾಜಧಾನಿಯ ಅರ್ಹ ಮಹಿಳೆಯರಿಗೆ ತಿಂಗಳಿಗೆ ₹2,500

ಯಾರಿಂದಲೂ ಇನ್ನೊಬ್ಬರ ನಾಯಕತ್ವವನ್ನು ತಪ್ಪಿಸೋಕೆ ಸಾಧ್ಯವಿಲ್ಲ: ಸತೀಶ್ ಜಾರಕಿಹೊಳಿ

Toxic Cinema: ರುಕ್ಮಿಣಿ ನಿಮ್ಮಿಂದ ಇದನ್ನು ನಾನು ನಿಜವಾಗಿಯೂ ನಿರೀಕ್ಷಿಸಿರಲಿಲ್ಲ

ಮುಂದಿನ ಸುದ್ದಿ
Show comments