Webdunia - Bharat's app for daily news and videos

Install App

ಸಿಎಂಗೆ ನಾಚಿಕೆ ಆಗಬೇಕು, ಕುಡಿಯುವ ನೀರಿಗೂ ಭಿಕ್ಷೆ ಬೇಡಬೇಕಾ? ಕಣ್ಣೀರಿಟ್ಟ ದೇವೇಗೌಡರು

Webdunia
ಶನಿವಾರ, 25 ಫೆಬ್ರವರಿ 2017 (17:52 IST)
ನಾನು ಜೀವಂತವಿರುವಾಗಲೇ ಜಿಲ್ಲೆಯಲ್ಲಿ ನೀರಿನ ಸಮಸ್ಯೆ ಕಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯರನ್ನು ತರಾಟೆಗೆ ತೆಗೆದುಕೊಂಡ ದೇವೇಗೌಡರು, ಆತನಿಗೆ ನಾಚಿಕೆ ಆಗಬೇಕು, ಕುಡಿಯುವ ನೀರಿಗೂ ಭಿಕ್ಷೆ ಬೇಡಬೇಕಾ? ಎಂದು ವಾಗ್ದಾಳಿ ನಡೆಸಿದರು.
 
ಜೆಡಿಎಸ್ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ಹಾಸನ ಜಿಲ್ಲೆಗೆ ಭೇಟಿ ನೀಡಲು ಅಧಿಕಾರಿಗಳು ಭತ್ಯೆ ಪಡೆಯುವುದಿಲ್ಲವೇ? ಕೇವಲ ಸಭೆ ನಡೆಸಿದ್ದೇವೆ. ಚರ್ಚೆ ನಡೆಸಿದ್ದೇವೆ ಎಂದು ಅಧಿಕಾರಿಗಳು ಹೇಳುತ್ತಿರುವುದು ನಾಚಿಕೆಗೇಡಿತನದ ಸಂಗತಿಯಾಗಿದೆ ಎಂದು ಕಣ್ಣೀರು ಹಾಕಿದ್ದಾರೆ.
 
ಕೆಆರ್‌ಎಸ್‌ ಗೆ ಹೇಮಾವತಿ ಡ್ಯಾಂ ನೀರು ಬಿಡುಗಡೆ ವಿರೋಧಿಸಿ ಹಾಸನ ಬಂದ್`ಗೆ ಜೆಡಿಎಸ್ ಸೇರಿ ವಿವಿಧ ಸಂಘಟನೆಗಳು ಬಂದ್`ಗೆ ಕರೆ ನೀಡಿದ್ದವು. ಬಂದ್ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿತ್ತು,  ಡಿಸಿ ಕಚೇರಿ ಎದುರು ಪ್ರತಿಭಟನೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಭಾಗವಹಿಸಿದ್ದರು
 
ನಮ್ಮಲ್ಲೇ ನೀರಿನ ಕೊರತೆ ಇದೆ ಅಂತಹುದರಲ್ಲಿ ನಮ್ಮ  ಭಾವನೆಗಳಿಗೆ ಬೆಲೆ ಕೊಡದೇ ಕೆಆರ್‌ಎಸ್‌ಗೆ ನೀರು ಬಿಡುಗಡೆ ಮಾಡುತ್ತಿರುವುದು ಸರಿಯಲ್ಲ ಎಂಬುದು ಜನರ ಆಕ್ರೋಶವಾಗಿದೆ.
 
ಪ್ರತಿಭಟನೆ ವೇಳೆ ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ ದೇವೇಗೌಡರು, ನಾನು ತಾಳ್ಮೆ ಕಳೆದುಕೊಂಡಿದ್ದೇನೆ. ಕೂಡಲೇ ಹೇಮಾವತಿಯಿಂದ ಕೆಆರ್`ಎಸ್`ಗೆ ನೀರು ಬಿಡುಗಡೆ ನಿಲ್ಲಿಸಬೇಕು. ಇಲ್ಲವಾದರೆ ಸಿಎಂ ಮನೆಮುಂದೆ ಪ್ರತಿಭಟನೆ ನಡೆಸುವುದಾಗಿ ದೇವೇಗೌಡರು ಎಚ್ಚರಿಕೆ ನೀಡಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments