Webdunia - Bharat's app for daily news and videos

Install App

ಕೆನಡಾದಲ್ಲಿನ ಸಂಸದ ಕನ್ನಡಿಗ ಚಂದ್ರ ಆರ್ಯ ಬೆಂಗಳೂರಿಗೆ ಭೇಟಿ

Webdunia
ಗುರುವಾರ, 14 ಜುಲೈ 2022 (15:54 IST)
ಸಂಸತ್ತಿನಲ್ಲಿ ಕನ್ನಡದಲ್ಲಿ ಮಾತನಾಡಿ ಕನ್ನಡಿಗರ ಗಮನ ಸೆಳೆದಿರುವ ಕೆನಡಾ ಸಂಸದ ಚಂದ್ರ ಆರ್ಯ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯತ್ವ ಪಡೆದಿದ್ದಾರೆ. ಬೆಂಗಳೂರಿನ ಕಸಾಪ ಕಚೇರಿಗೆ ತಮ್ಮ ಕುಟುಂಬದೊಂದಿಗೆ ಭೇಟಿ ನೀಡಿದ ಅವರಿಗೆ ಅಧ್ಯಕ್ಷ ಮಹೇಶ ಜೋಶಿ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯತ್ವ ನೀಡಿದರು.
ಈ ಕುರಿತು ಮಾತನಾಡಿದ ಚಂದ್ರ ಆರ್ಯ, ಜಾತಿ, ಮತ, ಪಂಥ, ಧರ್ಮಗಳ ಕಟ್ಟುಗಳನ್ನು ಮೀರಿ ಏಕಸೂತ್ರದಲ್ಲಿ ಎಲ್ಲರನ್ನೂ ಒಂದು ಮಾಡುವ ಶಕ್ತಿ ಮಾತೃಭಾಷೆಗಿದೆ. ಈ ಭಾಷಾಬಂಧನಕ್ಕೆ ಪ್ರಪಂಚದಲ್ಲಿ ಎಲ್ಲರನ್ನೂ ಒಂದು ಮಾಡುವ ಶಕ್ತಿ ಇದೆ.
 
ಇತ್ತೀಚಿನ ದಿನಗಳಲ್ಲಿ ಮಹೇಶ ಜೋಶಿ ಅವರ ನೇತೃತ್ವದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಕನ್ನಡ ಜನಸಾಮಾನ್ಯರ ಪರಿಷತ್ತಾಗುತ್ತಿದೆ. ಇಲ್ಲಿ ನಡೆಯುತ್ತಿರುವ ಎಲ್ಲಾ ಕಾರ್ಯಚಟುವಟಿಕೆಗಳು ಕನ್ನಡ-ಕನ್ನಡಿಗ-ಕರ್ನಾಟಕವನ್ನು ಗಟ್ಟಿಗೊಳಿಸುವಂಥದ್ದು ಎಂದರು.
 
ಬಳಿಕ ಮಹೇಶ ಜೋಶಿ ಮಾತನಾಡಿ, ಚಂದ್ರ ಆರ್ಯ ಕೆನಾಡದ ಸಂಸದರಾಗಿ ಪ್ರಮಾಣವಚನವನ್ನು ಕನ್ನಡದಲ್ಲೇ ಸ್ವೀಕರಿಸುವುದರ ಮೂಲಕ ಭಾಷಾಭಿಮಾನ ಮೆರೆದಿದ್ದರು. ಅಲ್ಲದೇ ಕೆನಡಾದಲ್ಲಿ ಪರಿಷತ್ತಿನ ಘಟಕದ ಮುಂದಾಳತ್ವವನ್ನು ತೆಗೆದುಕೊಂಡಿರುವುದು ಶ್ಲಾಘನೀಯ. ಹಾವೇರಿಯಲ್ಲಿ ನಡೆಯಲಿರುವ ೮೬ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುಖ್ಯ ಅಥಿತಿಗಳಾಗಿ ಭಾಗವಹಿಸುವುದಕ್ಕೆ ಒಪ್ಪಿಗೆ ನೀಡಿದ್ದಾರೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣ ಮಾಡಿದ್ದ ಈ ಒಂದು ದರ್ಪದ ವರ್ತನೆಯೇ ಅವರು ಸಿಕ್ಕಿಹಾಕುವಂತೆ ಮಾಡಿತು

ಮೇಘಾಲಯ ಹನಿಮೂನ್ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ: ಇಲ್ಲಿದೆ ಡೀಟೈಲ್ಸ್

ಪ್ರಜ್ವಲ್ ರೇವಣ್ಣ ಶಿಕ್ಷೆ ಪ್ರಕಟ ವೇಳೆ ತಂದೆ ಎಚ್ ಡಿ ರೇವಣ್ಣ, ಭವಾನಿ ಎಲ್ಲಿದ್ದಾರೆ

ಧರ್ಮಸ್ಥಳ ಕೇಸ್: 9 ನೇ ಪಾಯಿಂಟ್ ನಲ್ಲಿ ಹೂತ ಬಾಲಕಿ ಬಗ್ಗೆ ದೂರುದಾರನ ವಿವರಣೆ ಹೇಗಿತ್ತು

ಮುಂದಿನ ಸುದ್ದಿ
Show comments