Webdunia - Bharat's app for daily news and videos

Install App

ಕೊರೋನಾ ಭೀತಿ : ಶ್ರೀ ದತ್ತಾತ್ರೇಯ ದೇವಸ್ಥಾನದಲ್ಲಿ ದೇವರ ದರ್ಶನ ರದ್ದು

Webdunia
ಶುಕ್ರವಾರ, 20 ಮಾರ್ಚ್ 2020 (20:10 IST)
ಕೊರೋನಾ ವೈರಸ್ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯದ ಪ್ರಖ್ಯಾತ ಶ್ರೀ ದತ್ತಾತ್ರೇಯ ದೇವಸ್ಥಾನದಲ್ಲಿ ದೇವರ ದರ್ಶನ ರದ್ದುಗೊಳಿಸಲಾಗಿದೆ.

ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ದೇವಲಗಾಣಗಾಪುರದ ಶ್ರೀ ದತ್ತಾತ್ರೇಯ ದೇವಸ್ಥಾನದಲ್ಲಿ ನಡೆಯುವ ಸಭೆ, ಸಮಾರಂಭ ಹಾಗೂ ಮತ್ತಿತರ ಜನಸಂದಣಿ ಸೇರುವ ಕಾರ್ಯಕ್ರಮಗಳ್ನು ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ ಎಂದು ಅಫಜಲಪುರ ತಾಲೂಕಿನ ಗಾಣಗಾಪುರ ಶ್ರೀ ದತ್ತಾತ್ರೇಯ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದ್ದಾರೆ.

ಇದರ ಜೊತೆಗೆ ಭಕ್ತಾಧಿಗಳು ಸ್ವಯಂ ಆಗಿ ದೇವರ ದರ್ಶನಕ್ಕೆ ಬರುವುದು, ಪೂಜಾ ಸೇವೆಗಳನ್ನು, ನಿತ್ಯ ಅನ್ನಸಂತರ್ಪಣೆ ಹಾಗೂ ದೇವರ ದರ್ಶನ ಸೇರಿದಂತೆ ಉಳಿದ ಎಲ್ಲ ಸೇವೆಗಳನ್ನು ಮುಂದಿನ ಆದೇಶದವರೆಗೆ ರದ್ದುಪಡಿಸಲಾಗಿದೆ. ಈ ದೇವಸ್ಥಾನದಲ್ಲಿ ರಾಜ್ಯ ಮತ್ತು ನೆರೆ ರಾಜ್ಯದಿಂದ ಬರುವ  ಭಕ್ತಾಧಿಗಳಿಗೆ ಹಾಗೂ ಸಾರ್ವಜನಿಕರಿಗೆ ದೇವಸ್ಥಾನದ ವಸತಿ ಕೋಣೆ ಮತ್ತು ಯಾತ್ರಿ ನಿವಾಸದ ಕೋಣೆಯಲ್ಲಿ ಹಾಗೂ ದೇವಾಲಯದ ಇನ್ನುಳಿದ ತೆರೆದ ಪ್ರದೇಶದಲ್ಲಿಯೂ ತಂಗುವುದನ್ನು ಸಹ ನಿಷೇಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್, ಇರಾನ್ ಯುದ್ಧ ಆದ್ರೆ ಟೆನ್ಷನ್ ಪಾಕಿಸ್ತಾನಕ್ಕೆ: ಯಾಕೆ ಗೊತ್ತಾ

ಅಹಮದಾಬಾದ್ ವಿಮಾನ ಪತನ: ಸಾವಿನ ಸಂಖ್ಯೆ 274 ಕ್ಕೆ ಏರಿಕೆ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

Karnataka Weather: ಜೂನ್ 16 ರವರೆಗೂ ಈ ಜಿಲ್ಲೆಗಳ ಹವಾಮಾನ ತಪ್ಪದೇ ಗಮನಿಸಿ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಮುಂದಿನ ಸುದ್ದಿ
Show comments