Webdunia - Bharat's app for daily news and videos

Install App

ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿ ರದ್ದು ಮಾಡಿ: ಡಿ.ಕೆ. ಶಿವಕುಮಾರ್ ಆಗ್ರಹ

Webdunia
ಸೋಮವಾರ, 30 ಮೇ 2022 (20:06 IST)
ಶಾಲಾ ಪಠ್ಯಪುಸ್ತಕದಲ್ಲಿ ಅನಗತ್ಯ ಗೊಂದಲ ಸೃಷ್ಟಿಸಿರುವ, ರಾಷ್ಟ್ರಕವಿ ಕುವೆಂಪು ಹಾಗೂ ನಾಡಗೀತೆಗೆ ಅಪಮಾನ ಮಾಡಿರುವ ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯ ಪರಿಷ್ಕರಣಾ ಸಮಿತಿಯನ್ನು ಕೂಡಲೇ ರದ್ದುಗೊಳಿಸಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸರ್ಕಾರವನ್ನು ಆಗ್ರಹಿಸಿದ್ದಾರೆ.
 
ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಹೇಳಿದ್ದಿಷ್ಟು;
 
‘ಶಿಕ್ಷಣ ಸಚಿವ ನಾಗೇಶ್ ಹಾಗೂ ಬಿಜೆಪಿ ಸರ್ಕಾರ ಪಠ್ಯ ಪುಸ್ತಕ ವಿಚಾರವಾಗಿ ರಾಜ್ಯದಲ್ಲಿ ಗೊಂದಲ ನಿರ್ಮಾಣ ಮಾಡುತ್ತಿದ್ದು, ಇತಿಹಾಸವನ್ನು ಯಾರಿಂದಲೂ ಬದಲಿಸಲು ಸಾಧ್ಯವಿಲ್ಲ. ಯಾವುದೇ ಸಮಿತಿಯ ಅಧ್ಯಕ್ಷರಾದವರು ತಮ್ಮದೇ ಆದ ವರ್ಚಸ್ಸು ಇಟ್ಟುಕೊಂಡಿರಬೇಕು. ಆದರೆ ಆ ವ್ಯಕ್ತಿಗೆ ಕನ್ನಡ ಭಾಷೆ, ಬಾವುಟದ ಬಗ್ಗೆಯೇ ಗೌರವವಿಲ್ಲ. ರಾಷ್ಟ್ರಕವಿ ಕುವೆಂಪು ಅವರ ಆಚಾರ, ವಿಚಾರವನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಒಪ್ಪಿ, ಅವರಿಗೆ ಎಲ್ಲ ರೀತಿಯ ಗೌರವಗಳನ್ನು ನೀಡಿವೆ. ಅವರ ನಾಡಗೀತೆ ಮೂಲಕ ನಾವು ನಮ್ಮ ನಾಡಿನ ಬಗ್ಗೆ ಮುಂದಿನ ಪೀಳಿಗೆಗೆ ಮನದಟ್ಟು ಮಾಡಿಕೊಡುತ್ತಿದ್ದೇವೆ. ಅಂತಹವರ ಬಗ್ಗೆ ಈ ವ್ಯಕ್ತಿ ಅವಹೇಳನಕಾರಿ ಮಾತಾಡಿರುವುದು ಖಂಡನೀಯ.
 
ಕುವೆಂಪು ಅವರ ಬಗ್ಗೆ ಕನಿಷ್ಠ ಪ್ರೀತಿ, ಗೌರವ ಇಟ್ಟುಕೊಂಡಿರಬೇಕು. ನಮ್ಮ ರಾಜ್ಯದ ಕವಿಗಳಿಗೆ ಅಪಮಾನ ಮಾಡಿರುವುದು
ಹಾಗೂ ರಾಜ್ಯದ ಇತಿಹಾಸವನ್ನು ತಿರುಚುತ್ತಿರುವುದರ ಬಗ್ಗೆ ನಾನು ಹೆಚ್ಚು ಮಾತನಾಡುವುದಿಲ್ಲ. ಈ ರಾಜ್ಯದ ಸಾಹಿತಿಗಳು, ಸಂಘಟನೆಗಳು, ಶಿಕ್ಷಕರು, ವಿದ್ಯಾರ್ಥಿಗಳು ಈ ವಿಚಾರವಾಗಿ ಧ್ವನಿ ಎತ್ತಬೇಕು ಎಂದು ಮನವಿ ಮಾಡುತ್ತೇನೆ. ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿಯನ್ನು ಕೂಡಲೇ ರದ್ದು ಮಾಡಿ, ಈ ಹಿಂದಿನ ವರ್ಷಗಳಲ್ಲಿ ಇದ್ದ ಪಠ್ಯವನ್ನೇ ಯಾವುದೇ ಬದಲಾವಣೆ ಮಾಡದೇ ಈ ವರ್ಷವೂ ಮುಂದುವರಿಸಿಕೊಂಡು ಹೋಗಬೇಕು. 
 
ಈ ಹಿಂದೆ ಇದ್ದ ಪಠ್ಯ ಪುಸ್ತಕಗಳನ್ನು ಓದಿಕೊಂಡೆ ಅನೇಕರು ವಿದ್ಯಾವಂತರಾಗಿದ್ದಾರೆ. ನಮಗೆ ಜ್ಞಾನ, ಮಾತನಾಡುವ ಶಕ್ತಿಯನ್ನು ಕೊಟ್ಟಿರುವ, ಹಿರಿಯರ ಮಾರ್ಗದರ್ಶನ ಹೊಂದಿರುವ ಪಠ್ಯ ಪುಸ್ತಕವನ್ನು ಬದಲಿಸಲು ಮುಂದಾಗಿರುವುದು ಅಕ್ಷಮ್ಯ. ನೀವು ಇಷ್ಟು ಪ್ರಮಾಣದಲ್ಲಿ ಮಾತನಾಡಲು ಶಕ್ತಿ ಕೊಟ್ಟಿರುವುದು ಇದೇ ಪಠ್ಯ ಪುಸ್ತಕಗಳಲ್ಲವೇ? ಇದನ್ನು ಯಾವ ಕಾರಣಕ್ಕೆ ಬದಲಿಸಲು ಪ್ರಯತ್ನಿಸುತ್ತಿದ್ದೀರಿ. ಇವರ ಈ ಪ್ರಯತ್ನ ನೋಡಿದರೆ ನಮ್ಮ ಇತಿಹಾಸದ ಬಗ್ಗೆ ನಮಗೆ ಅನುಮಾನ ಮೂಡುವಂತೆ ಮಾಡುತ್ತಿದೆ. ಹೀಗಾಗಿ ಪಠ್ಯ ಬದಲಿಸುವ ನಿರ್ಧಾರವನ್ನು ಸರ್ಕಾರ ಕೈಬಿಡಬೇಕು ಎಂದು ಆಗ್ರಹಿಸುತ್ತೇನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments