Webdunia - Bharat's app for daily news and videos

Install App

ಸಿಂದಗಿ ಹಾಗೂ ಹಾನಗಲ್ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿ ಆಯ್ಕೆ

Webdunia
ಶನಿವಾರ, 2 ಅಕ್ಟೋಬರ್ 2021 (22:12 IST)
ಬೆಂಗಳೂರು: ಸಿಂದಗಿ ಹಾಗೂ ಹಾನಗಲ್ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿ ಆಯ್ಕೆ ರಾಷ್ಟ್ರೀಯ ಪಕ್ಷಗಳು ಕಗ್ಗಂಟಾಗಿದೆ.
ಆಕಾಂಕ್ಷಿಗಳ ಪಟ್ಟಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿ ರಾಜ್ಯ ನಾಯಕರು ಕೇಂದ್ರದ ಕದ ತಟ್ಟಿದ್ದಾರೆ. ಕೆಲ ಆಕಾಂಕ್ಷಿಗಳು ರಾಷ್ಟ್ರೀಯ ನಾಯಕರೊಂದಿಗೆ ಸಂಪರ್ಕದಲ್ಲಿದ್ದು, ಶತಾಯ ಗತಯ ಟಿಕೇಟ್ ಪಡೆಯಬೇಕು ಎಂದು ಲಾಬಿ ಮಾಡುತ್ತಿದ್ದಾರೆ.
ಈಗಾಗಲೇ ಕಾಂಗ್ರೆಸ್ ಹಾಗೂ ಬಿಜೆಪಿ ರಾಜ್ಯ ನಾಯಕರು ಕ್ಷೇತ್ರಗಳಿಗೆ ಭೇಟಿ ನೀಡಿ ಆಕಾಂಕ್ಷಿಗಳ ಪಟ್ಟಿ ಮಾಡಿದ್ದು, ಕೇಂದ್ರಕ್ಕೆ ಕಳುಹಿಸಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ. ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಕೇಂದ್ರದ ತೀರ್ಮಾನವೇ ಅಂತಿಮವಾಗಿದೆ.
ಇನ್ನು ಮುಖ್ಯಮಂತ್ರಿ ಯಾಗಿ ಅಧಿಕಾರ ಸ್ವೀಕರಿಸಿರುವ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಮೊದಲ ಉಪಚುನಾವಣೆ ಇದಾಗಿದ್ದು, ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ. ಆದ್ದರಿಂದ  ಅಭ್ಯರ್ಥಿ ಆಯ್ಕೆಯಲ್ಲಿ ಲೆಕ್ಕಾ ಚಾರ ಆರಂಭಿಸಿದೆ‌. ಪಕ್ಷ ಸಂಘಟನೆ ಮಾಡಿದವರು, ತಳಮಟ್ಟದ ಸಮಸ್ಯೆ ಅರಿತವರಿಗೆ ಟಿಕೇಟ್ ನೀಡಲು ಬಿಜೆಪಿ ತೀರ್ಮಾನಿಸಿದೆ.
ಪ್ರಾದೇಶಿಕ ಪಕ್ಷವಾದ ಜೆಡಿಎಸ್ ಸಿಂದಗಿಗೆ ನಾಜಿಯಾ ಶಕೀಲಾ ಹಾಗೂ ಹಾನಗಲ್ ಕ್ಷೇತ್ರಕ್ಕೆ ನಿಯಾಜ್ ಶೇಕ್ ಅವರಿಗೆ ಟಿಕೇಟ್ ನೀಡಿದ್ದು, ಇದೀಗ ರಾಷ್ಟ್ರೀಯ ಪಕ್ಷಗಳು ಮಾತ್ರ ಅಭ್ಯರ್ಥಿ ಗಳನ್ನು ಘೋಷಿಸಬೇಕಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments