Webdunia - Bharat's app for daily news and videos

Install App

ಗಾಂಜಾ ಸೇವನೆ: ಆರೋಪಿಗಳು ಅಂದರ್

Webdunia
ಶನಿವಾರ, 26 ಜನವರಿ 2019 (17:53 IST)
ಸಾರ್ವಜನಿಕ ಮೈದಾನದ ಬಳಿ ಗಾಂಜಾ ಸೇವನೆ ಮತ್ತು ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು  ಬಂಧಿಸಲಾಗಿದೆ.  
 ಮಂಗಳೂರು ನಗರದ ಕದ್ರಿ ಸಾರ್ವಜನಿಕ ಮೈದಾನದ ಬಳಿ ಗಾಂಜಾ ಸೇವನೆ ಮತ್ತು ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು  ಇಕೊನಾಮಿಕ್ ನಾರ್ಕೋಟಿಕ್ಸ್ ಕ್ರೈಂ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ನಗರದ ಕೊಡಿಯಾಲ್ಬೈಲ್ ಶರಾಜ್, ಕದ್ರಿಯ ಚಿರಾಗ್, ಕಾರ್ಸ್ಟ್ರೀಟ್ ನಿವಾಸಿಗಳಾದ ಅನಂತ್, ಪವನ್ ಬಂಧಿತ ಆರೋಪಿಗಳು. ಗಾಂಜಾ ಸೇವನೆ ಆರೋಪದಲ್ಲಿ ಕುಶಾಲನಗರ ನಿವಾಸಿ ರೋಹನ್, ಕಾಂಜಂಗಾಡ್ ನಿವಾಸಿ ಸದಾಶಿವ ಕಾಮತ್, ಬಿಜೈ ಕಾಪಿಕಾಡು ನಿವಾಸಿ ಭದ್ರೇಶ್, ಕೊಟ್ಟಾರ ನಿವಾಸಿ ಸುನೀಲ್ ಭಟ್ ವಶಕ್ಕೆ ಪಡೆಯಲಾಗಿದೆ.

ಆರೋಪಿಗಳಿಂದ 14.900 ರೂ. ಮೌಲ್ಯದ ಸುಮಾರು 500 ಗ್ರಾಂ ತೂಕದ ಗಾಂಜಾ ಹಾಗೂ 58ಸಾವಿರ ರೂ. ಮೌಲ್ಯದ 4 ಮೊಬೈಲ್ಪೋನ್ಗಳು ಹಾಗೂ ಸುಮಾರು10 ಸಾವಿರ ರೂ. ಮೌಲ್ಯದ ಅಮಲಿನ ಮಾತ್ರೆಗಳು ಹಾಗೂ ಕೃತ್ಯಕ್ಕೆ ಬಳಸಿದ ಎರಡು ದ್ವಿಚಕ್ರ ವಾಹನ ಹಾಗೂ ನಗದು 3800 ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿದ ಸೊತ್ತುಗಳ ಮೌಲ್ಯ 1,35,700 ರೂ. ಎಂದು ಅಂದಾಜಿಸಲಾಗಿದೆ. ಕಾರ್ಯಾಚರಣೆಯಲ್ಲಿ ಮೇಲಧಿಕಾರಿಗಳ ನಿರ್ದೇಶನದಂತೆ ನಾರ್ಕೋಟಿಕ್ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರು ಮತ್ತು ಸಿಬ್ಬಂದಿ ಭಾಗವಹಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments