Webdunia - Bharat's app for daily news and videos

Install App

ಸಿನಿಮಾ ರೀತಿಯಲ್ಲಿ ಚಿಪ್ಪಂದಿಕಳ್ಳರ ಸೆರೆ

Webdunia
ಭಾನುವಾರ, 28 ಅಕ್ಟೋಬರ್ 2018 (18:39 IST)
ಚಿಪ್ಪಂದಿ ಕಳ್ಳರ ಮಾರಾಟದ ಜಾಡು ಹಿಡಿದು ಸಾಗಿದ್ದ ಅರಣ್ಯ ಇಲಾಖೆ ಸಿಬ್ಬಂದಿ ಸಿನಿಮಾ ರೀತಿಯಲ್ಲಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕನಕಪುರದ ಅನಿಲ್ ಕುಮಾರ್, ಬೆಂಗಳೂರಿನ ಇನಾಯತ್  ಬಂಧಿತ ಆರೋಪಿಗಳಾಗಿದ್ದಾರೆ. ಚಿಪ್ಪಂದಿ ಕಳ್ಳರ ಮಾರಾಟದ ಜಾಡು ಹಿಡಿದು ಸಾಗಿದ್ದ ಅರಣ್ಯ ಇಲಾಖೆ ಸಿಬ್ಬಂದಿ, ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದರು. 

ಗಿರಾಕಿಗಳ ವೇಷದಲ್ಲಿ ತೆರಳಿ ಆರೋಪಿಗಳ ಸೆರೆ ಹಿಡಿದ ಅರಣ್ಯ ಸಿಬ್ಬಂದಿ ತೋಡಿದ್ದ ಖೆಡ್ಡಕ್ಕೆ ಬಂದು ಚಿಪ್ಪಂದಿ ಕಳ್ಳರು ಬಿದ್ದಿದ್ದಾರೆ.
ಮಂಡ್ಯ ಜಿಲ್ಲೆಯ ಹಲಗೂರು ಬಳಿ ಆರೋಪಿಗಳ ಬಂಧನ ಮಾಡಲಾಗಿದೆ. ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ ಕಾರ್ ಹಾಗೂ ಜೀವಂತ ಚಿಪ್ಪಂದಿ ವಶ ಪಡಿಸಿಕೊಳ್ಳಲಾಗಿದೆ.

ಚಿಪ್ಪಂದಿಯನ್ನು ಚಿತ್ರದುರ್ಗದ ಬಳಿ ಸೆರೆ ಹಿಡಿದಿರೋದಾಗಿ ಆರೋಪಿಗಳು ಹೇಳಿಕೆ ನೀಡಿದ್ದಾರೆ. ಚಿಪ್ಪಂದಿಗಳು ಮನೆಯಲ್ಲಿದ್ದರೆ ಸಂಪತ್ತು ಹೆಚ್ಚಾಗುತ್ತೆ ಅನ್ನೋ ನಂಬಿಕೆ ಇದೆ. ಮತ್ತೊಂದೆಡೆ ಚಿಪ್ಪಂದಿ ಮಾಂಸ ಹಾಗೂ ಚಿಪ್ಪುಗಳಿಗೆ ವಿದೇಶಗಳಲ್ಲಿ ಬಹಳ ಬೇಡಿಕೆಯೂ ಇದೆ. ಚಿಪ್ಪಂದಿ ಚಿಪ್ಪುಗಳಿಂದ ಅಭರಣಗಳ ತಯಾರಿಕೆಗೆ ಬಳಕೆ ಮಾಡಲಾಗುತ್ತದೆ.  

ಸಂಚಾರಿ ದಳ ಡಿಸಿಎಫ್ ಪೂವಯ್ಯ ನೇತೃತ್ವದ ತಂಡದಿಂದ ನಡೆದ ಕಾರ್ಯಾಚರಣೆ ಇದಾಗಿದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments