Publish Date: Tue, 31 Aug 2021 (10:10 IST)
Updated Date: Tue, 31 Aug 2021 (10:21 IST)
ಬೆಂಗಳೂರು: ತಡರಾತ್ರಿ ನಡೆದ ಕಾರು ಅಪಘಾತದಲ್ಲಿ ತಮಿಳುನಾಡಿನ ಡಿಎಂಕೆ ಶಾಸಕ ವೈ. ಪ್ರಕಾಶ್ ಪುತ್ರ ಕರುಣಾ ಸಾಗರ್ ಸೇರಿ 7 ಮಂದಿ ಮೃತಪಟ್ಟಿದ್ದಾರೆ.
ಆಡಿ ಕಾರಿನಲ್ಲಿ ತೆರಳುತ್ತಿದ್ದಾಗ ಕೋರಮಂಗಲ ಬಳಿ ಫುಟ್ ಪಾತ್ ಮೇಲೆ ಹರಿದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ. ಪರಿಣಾಮ ಶಾಸಕರ ಪುತ್ರ ಕರುಣಾಸಾಗರ್, ಸೊಸೆ ಸೇರಿ ಏಳು ಮಂದಿ ಸಾವನ್ನಪ್ಪಿದ್ದಾರೆ.
ಅಪಘಾತದ ವೇಳೆ ಯಾರೂ ಸೀಟ್ ಬೆಲ್ಟ್ ಹಾಕಿಕೊಂಡಿರಲಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಸದ್ಯಕ್ಕೆ ಮೃತದೇಹಗಳನ್ನು ಸೈಂಟ್ ಜೋನ್ಸ್ ಆಸ್ಪತ್ರೆಯಲ್ಲಿರಿಸಲಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಸಂಬಂಧಿಕರಿಗೆ ಹಸ್ತಾಂತರಿಸಲಾಗುತ್ತದೆ.