Select Your Language

Notifications

webdunia
webdunia
webdunia
webdunia

ಬೈಕ್​ ಸವಾರನ ಮೇಲೆ ಕಾರು ಚಾಲಕ ಗುಂಡು ಹಾರಿಸಿದ ಪ್ರಕರಣ - ಆರೋಪಿ ಕಾರು ಮಾಲೀಕ ಪತ್ತೆ

ಬೈಕ್​ ಸವಾರನ ಮೇಲೆ ಕಾರು ಚಾಲಕ ಗುಂಡು ಹಾರಿಸಿದ ಪ್ರಕರಣ - ಆರೋಪಿ ಕಾರು ಮಾಲೀಕ  ಪತ್ತೆ
bangalore , ಶುಕ್ರವಾರ, 15 ಅಕ್ಟೋಬರ್ 2021 (21:53 IST)
ಬೆಂಗಳೂರು: ಬೈಕ್​ ಸವಾರನ ಮೇಲೆ ಕಾರು ಚಾಲಕ ಗುಂಡು ಹಾರಿಸಿದ ಪ್ರಕರಣ ಸಂಬಂಧ ಇದೀಗ ಆರೋಪಿ ಕಾರು ಮಾಲೀಕನನ್ನು ಪೊಲೀಸರು ಪತ್ತೆ ಮಾಡಿ ವಶಕ್ಕೆ ಪಡೆದಿದ್ದಾರೆ.
 
ಯಶವಂತಪುರ ಠಾಣಾ ವ್ಯಾಪ್ತಿಯ ಎಂ.ಎಸ್.ರಾಮಯ್ಯ ಆಸ್ಪತ್ರೆ ಹಿಂಬದಿಯ ರಸ್ತೆಯಲ್ಲಿ ತನ್ನ ಐಷಾರಾಮಿ ಔಡಿ ಕಾರಿಗೆ ಬೈಕ್ ತಾಗಿಸಿದ್ದಾನೆ ಎಂದು ಕೋಪಗೊಂಡ ಕಾರು ಚಾಲಕ ಅನಿಲ್​ ಎಂಬ ಬೈಕ್ ಸವಾರನ ಮೇಲೆ ಎರಡು ಬಾರಿ ಗುಂಡು ಹಾರಿಸಿ ಇತ್ತೀಚೆಗೆ ಪರಾರಿಯಾಗಿದ್ದನು. ಅದೃಷ್ಟವಶಾತ್ ಅನಿಲ್ ಪ್ರಾಣಾಪಾಯದಿಂದ ಪಾರಾಗಿದ್ದನು.ಈ ಘಟನೆ ಸಂಬಂಧ ಎಫ್​ಐಆರ್​ ದಾಖಲಿಸಿಕೊಂಡಿದ್ದ ಯಶವಂತಪುರ ಪೊಲೀಸರು, ಇದೀಗ ಕಾರು ಚಾಲಕನನ್ನು ತಮ್ಮ ವಶಕ್ಕೆ ಪಡೆದುಕೊಂಡು ಆತನ ವಿರುದ್ಧ ಐಪಿಸಿ ಸೆಕ್ಷನ್ 307, 323, ಹಾಗೂ ಆರ್ಮ್ಸ್ ಆಕ್ಟ್ ಅಡಿಯಲ್ಲಿ ಕೇಸ್ ದಾಖಲಿಸಿದ್ದಾರೆ.ಆರೋಪಿಯನ್ನು ಮಹಾಲಕ್ಷ್ಮಿ ಲೇಔಟ್‌ನಲ್ಲಿರುವ ಖಾಸಗಿ ಹೋಟೆಲ್‌ನ ಮಾಲೀಕ ರವೀಶ್ ಗೌಡ ಎಂದು ಗುರುತಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಗೂಂಡಾ ಕಾಯ್ದೆಯಡಿ ನಗರದ ಕಾರ್ತಿಕ್ ಅಲಿಯಾಸ್ ಉಲ್ಲಾಳು ಕಾರ್ತಿಕ್‌ನನ್ನು ಬಂಧಿಸಲು ಹೊರಡಿಸಿದ ಆದೇಶ