Select Your Language

Notifications

webdunia
webdunia
webdunia
webdunia

ಬೆಂಗಳೂರಿನಲ್ಲಿ ಭೀಕರ ದುರಂತ: ಕಾರು ಗುದ್ದಿದ ರಭಸಕ್ಕೆ ಮೇಲ್ಸೇತುವೆಯಿಂದ ಬಿದ್ದು ವ್ಯಕ್ತಿ ಸಾವು!

ಬೆಂಗಳೂರಿನಲ್ಲಿ ಭೀಕರ ದುರಂತ: ಕಾರು ಗುದ್ದಿದ ರಭಸಕ್ಕೆ ಮೇಲ್ಸೇತುವೆಯಿಂದ ಬಿದ್ದು ವ್ಯಕ್ತಿ ಸಾವು!
bengaluru , ಭಾನುವಾರ, 22 ಮೇ 2022 (14:50 IST)

ಅತೀ ವೇಗವಾಗಿ ಬಂದ ಕಾರು ಗುದ್ದಿದ್ದರಿಂದ ವ್ಯಕ್ತಿಯೊಬ್ಬರು ಮೇಲ್ಸೆತುವೆ ಮೇಲಿಂದ ಬಿದ್ದು ಸ್ಥಳದಲ್ಲೇ ಮೃತಪಟ್ಟರೆ, 5ನೇ ತರಗತಿ ವಿದ್ಯಾರ್ಥಿಯೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ.

44 ವರ್ಷದ ಗೋವಿಂದಪ್ಪ ಮೃತಪಟ್ಟಿದ್ದರೆ, ಚಿಕ್ಕಪ್ಪನ ಮಗ 12 ವರ್ಷದ ಬಾಲಕ ಸಂಜಯ್ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಮಾನ ತೋರಿಸ್ತೀನಿ ಅಂತ ದೊಡ್ಡಪ್ಪ, ತಮ್ಮನ ಮಗನನ್ನು ಬೈಕ್ ನಲ್ಲಿ ಕರೆದುಕೊಂಡು ಹೋಗಿ ಜಕ್ಕೂರು ಏರೋಡ್ರೋಮ್ ಬಳಿಯ ಮೇಲ್ಸೆತುವೆ ಮೇಲೆ ಬದಿಯಲ್ಲಿ ನಿಲ್ಲಿಸಿದ್ದರು. ಈ ವೇಳೆ ಅತೀ ವೇಗವಾಗಿ ಬಂದ ಕಾರು ಗುದ್ದಿದೆ.

ಕಾರು ಗುದ್ದಿದ ರಭಸಕ್ಕೆ ಗೋವಿಂದಪ್ಪ 200 ಮೀ. ದೂರ ಹಾಗಿ ಮೇಲ್ಸೆತುವೆ ಮೇಲಿಂದ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದರೆ, ಸಂಜಯ್ ಗಂಭಿರವಾಗಿ ಗಾಯಗೊಂಡಿದ್ದಾನೆ.


Share this Story:

Follow Webdunia kannada

ಮುಂದಿನ ಸುದ್ದಿ

ಸರಕಾರಿ ನೌಕರರು 15 ದಿನ ರಜೆ ಪಡೆಯುವಂತಿಲ್ಲ: ಸಿಎಂ ಬೊಮ್ಮಾಯಿ