Webdunia - Bharat's app for daily news and videos

Install App

ಮರಕ್ಕೆ ಕಾರು ಡಿಕ್ಕಿ: ಬಿಜೆಪಿ ಮುಖಂಡ ಸೇರಿ ಮೂವರ ಸಾವು

Webdunia
ಮಂಗಳವಾರ, 1 ಡಿಸೆಂಬರ್ 2015 (13:02 IST)
ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡದಲ್ಲಿ ಮರಕ್ಕೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ದುರ್ಮರಣವಪ್ಪಿದ ಘಟನೆ ನಡೆದಿದೆ.  ಮೃತರು ಬೆಳಗಾವಿಯ ಬಿಜೆಪಿ ಮುಖಂಡ ಮಹಾಂತೇಶ್ ಅಂಗಡಿ, ಸದಾನಂದ ಹಿರೇಮಠ ಮತ್ತು ಬಸವರಾಜ್‌ ಅಂಗಡಿ ಎಂದು ಗುರುತಿಸಲಾಗಿದೆ.  ಧರ್ಮಸ್ಥಳದಿಂದ ಬೆಳಗಾವಿಗೆ ವಾಪಸ್ ಆಗುವಾಗ ಮಂಗಳವಾರ ಮುಂಜಾನೆ  ಈ ಅಪಘಾತ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಗೋಕಾಕ್ ತಾಲೂಕಿನವರಾದ ಮಹಾಂತೇಶ್ ಅಂಗಡಿ ಬಿಜೆಪಿ ಮುಖಂಡರಾಗಿದ್ದರು ಮತ್ತು ಸ್ಥಿರಾಸ್ತಿ ವಹಿವಾಟಿನಲ್ಲಿ ತೊಡಗಿಸಿಕೊಂಡಿದ್ದರು.  ಮುಂಜಾನೆ ಮೂರು ಗಂಟೆಗೆ ಮರಕ್ಕೆ ಕಾರು ಡಿಕ್ಕಿಹೊಡೆದಿದ್ದರೂ ಬೆಳಿಗ್ಗೆ 5 ಗಂಟೆವರೆಗೆ ಯಾರ ಗಮನಕ್ಕೂ ಬಂದಿರಲಿಲ್ಲ.

ನಂದಗಡ ಪೊಲೀಸ್ ಠಾಣೆಗೆ ವಾಹನಸವಾರರೊಬ್ಬರು ಮಾಹಿತಿ ನೀಡಿದಾಗ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ಮಾಡಿದಾಗ ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದರು. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments