Webdunia - Bharat's app for daily news and videos

Install App

ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ ಮಹಿಳಾ ಅಭ್ಯರ್ಥಿಗಳಿಗೆ ವೃತ್ತಿ ತರಬೇತಿ

Webdunia
ಶುಕ್ರವಾರ, 21 ಜನವರಿ 2022 (21:01 IST)
ಕರ್ನಾಟಕ ಮಾಧ್ಯಮ ಅಕಾಡೆಮಿಯ ಪ್ರಸಕ್ತ ಸಾಲಿನ ಮಹಿಳಾ ಉದ್ದೇಶಿತ ಆಯವ್ಯಯ ಯೋಜನೆಯಲ್ಲಿ ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿರುವ ಮಹಿಳಾ ಅಭ್ಯರ್ಥಿಗಳಿಗೆ ಎರಡು ತಿಂಗಳ ವೃತ್ತಿ ತರಬೇತಿಯನ್ನು ಆಯೋಜಿಸಲಾಗಿದೆ.
ಆಸಕ್ತ, ಅರ್ಹ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಬಹುದು.
15 ಜನ ಮಹಿಳಾ ಅಭ್ಯರ್ಥಿಗಳನ್ನು ಪತ್ರಿಕೋದ್ಯಮ ಸ್ನಾತಕೋತ್ತರ ಪದವಿಯ ಗರಿಷ್ಠ ಅಂಕಗಳ‌ ಆಧಾರದ ಮೇಲೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಪ್ರತಿ ಮಾಸಿಕ 15 ಸಾವಿರ ರೂ.ಗಳ ಸ್ಟೈಫಂಡ್ ನೀಡಲಾಗುವುದು. ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿದ್ದು, ಕನ್ನಡ ಭಾಷೆಯಲ್ಲಿ ಪರಿಣಿತರಾಗಿರಬೇಕು.
ಅಭ್ಯರ್ಥಿಗಳು ಎಸ್ ಎಸ್ ಎಲ್ ಸಿ ಅಂಕಪಟ್ಟಿ, ಪದವಿ ಹಾಗೂ ಸ್ನಾತಕೋತ್ತರ ಪ್ರಮಾಣ ಪತ್ರಗಳೊಂದಿಗೆ ಪಾಸ್ ಪೋರ್ಟ್ ಅಳತೆಯ ಭಾವಚಿತ್ರ ಹಾಗೂ ಇನ್ನಿತರೆ ಪೂರಕ ದಾಖಲೆಗಳನ್ನು ( ಪಿಡಿಎಫ್) ಸ್ಕ್ಯಾನ್ ಮಾಡಿ ಇ ಮೇಲ್ ವಿಳಾಸ wbkma2022@gmail.com ಮೂಲಕ ಅಥವಾ ಅಂಚೆ ಮೂಲಕ ಜನವರಿ 29 ರೊಳಗಾಗಿ ತಲುಪುವಂತೆ ಕಳುಹಿಸಬೇಕು. ಅನಂತರ ಬಂದ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಮಾಧ್ಯಮ ಅಕಾಡೆಮಿ ಸೇರಿದಂತೆ ಯಾವುದೇ ಸರಕಾರಿ ಇಲಾಖೆ, ಸಂಸ್ಥೆಗಳಲ್ಲಿ ಫಲಾನುಭವಿಗಳಾಗಿದ್ದರೆ ಅಂತವರು ಅರ್ಜಿ ಸಲ್ಲಿಸುವಂತಿಲ್ಲ.
ಸರ್ಕಾರದಿಂದ ಸೌಲಭ್ಯ ಪಡೆದ ಅಭ್ಯರ್ಥಿಗಳಿಗೆ ಸುಳ್ಳು ಮಾಹಿತಿ ನೀಡಿ ಅರ್ಜಿ ಹಾಕಿದ್ದಲ್ಲಿ ಅವರ ಅರ್ಜಿಯನ್ನು ತಿರಸ್ಕರಿಸಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳ ದೂರವಾಣಿ ಸಂಖ್ಯೆ : 080-22860164 ಗೆ ಸಂಪರ್ಕಿಸಬಹುದು. ಕರ್ನಾಟಕ ಮಾಧ್ಯಮ ಅಕಾಡೆಮಿ, ವಿಶ್ವೇಶ್ವರಯ್ಯ ಕೇಂದ್ರ, ಡಾ.ಅಂಬೇಡ್ಕರ್ ವೀಧಿ, ಬೆಂಗಳೂರು – 560001 ಸಂಪರ್ಕಿಸಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments