ಕ್ಯಾನ್ಸರ್ ರೋಗಿಗಳನ್ನು ಜಾಗ್ರತೆಯಿಂದ ಆರೈಕೆ ಮಾಡಿ: ಸುಧಾಕರ್

Webdunia
ಶುಕ್ರವಾರ, 4 ಫೆಬ್ರವರಿ 2022 (14:40 IST)
ಬೆಂಗಳೂರು : ಕ್ಯಾನ್ಸರ್ ಪದದ ಅರ್ಥ ಸಾವು ಎಂದಲ್ಲ. ಇದೊಂದು ರೋಗದ ಹೆಸರು. ಕ್ಯಾನ್ಸರ್ ಬಂದಾಕ್ಷಣ ಸಾವು ಬಂದಿದೆ ಎಂಬ ಆತಂಕವನ್ನು ದೂರ ಮಾಡಲು ಜಾಗೃತಿ ಅಗತ್ಯ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ಬೆಂಗಳೂರಿನಲ್ಲಿ ಕ್ಯಾನ್ಸರ್ ದಿನದ ಪ್ರಯುಕ್ತ ಕ್ಯಾನ್ಸರ್ ಸಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿಶ್ವದಾದ್ಯಂತ ಕ್ಯಾನ್ಸರ್ ದಿನ ಆಚರಣೆ ಮಾಡಲಾಗುತ್ತಿದೆ. ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಲಹೆಯಂತೆ ಒಂದು ವಾರ ಕ್ಯಾನ್ಸರ್ ಸಪ್ತಾಹ ವಿನೂತನವಾಗಿ ನಡೆಯಲಿದೆ ಎಂದು ತಿಳಿಸಿದರು. 

ವಿಶ್ವ ಸಂಸ್ಥೆಯ ಪ್ರಕಾರ ಶಿಕ್ಷಣದ ಕೊರತೆ, ಬಡತನ ಇರುವ ರಾಷ್ಟ್ರಗಳಲ್ಲಿ ಕ್ಯಾನ್ಸರ್ ಪೀಡಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ರಾಜ್ಯ ಸರ್ಕಾರ ಬಡತನ ರೇಖೆಗಿಂತ ಕೆಳಗಿರುವವರಿಗೆ ಕ್ಯಾನ್ಸರ್ ಶಿಬಿರ ಹಮ್ಮಿಕೊಂಡಿದೆ.

ಕಿದ್ವಾಯಿ ಸಂಸ್ಥೆ, ಅನೇಕ ಸಂಘ ಸಂಸ್ಥೆಗಳು ಮತ್ತು ಆಸ್ಪತ್ರೆಗಳು ಇದಕ್ಕೆ ಕೈ ಜೋಡಿಸಿವೆ. ಎಷ್ಟು ಬೇಗ ಕ್ಯಾನ್ಸರ್ ಪತ್ತೆಯಾಗುತ್ತದೋ ಅಷ್ಟು ಬೇಗ ಗುಣಪಡಿಸಬಹುದು. ಕ್ಯಾನ್ಸರ್ ರೋಗಿಗಳನ್ನು ಪ್ರೀತಿ ಮತ್ತು ಎಚ್ಚರಿಕೆಯಿಂದ ಆರೈಕೆ ಮಾಡಿ ಎಂದು ಹೇಳಿದರು.

ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಕ್ಯಾನ್ಸರ್ ತಪಾಸಣೆಗೆ ವ್ಯವಸ್ಥೆ ಇದೆ. ಇದನ್ನು ತಾಲೂಕು ಆಸ್ಪತ್ರೆಗಳಿಗೂ ವಿಸ್ತರಣೆ ಮಾಡಲಾಗಿದೆ. ಸಮುದಾಯ ಆರೋಗ್ಯ ಕೇಂದ್ರಕ್ಕೂ ಇದನ್ನು ಶೀಘ್ರದಲ್ಲೇ ವಿಸ್ತರಣೆ ಮಾಡಲಾಗುವುದು.

ಮೈಸೂರು ಮತ್ತು ತುಮಕೂರಿನಲ್ಲಿ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ ಮಾಡಲಾಗಿದೆ. ಹುಬ್ಬಳ್ಳಿಯಲ್ಲೂ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ ಮಾಡಲು ಸರ್ಕಾರ ತಯಾರಿ ಮಾಡಿಕೊಳ್ಳುತ್ತಿದೆ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು: ಮೆಟ್ರೋ ರೈಲು ಬರುತ್ತಿದ್ದಂತ್ತೆ ಟ್ರ್ಯಾಕ್‌ಗೆ ಜಿಗಿದ ವ್ಯಕ್ತಿ

ರಷ್ಯಾ ಅಧ್ಯಕ್ಷ ಪುಟಿನ್ ನಡೆಯುವಾಗ ಬಲಗೈ ಚಲಿಸುವುದೇ ಇಲ್ಲ ಯಾಕೆ: ಶಾಕಿಂಗ್ ಸತ್ಯ ಬಯಲು

ಇಂಡಿಗೋ ವಿಮಾನ ಸೇವೆಯಲ್ಲಿ ಭಾರೀ ವ್ಯತ್ಯಯ: ಸಮಸ್ಯೆ ಗಂಭೀರವಾದ ಬೆನ್ನಲ್ಲೇ ಡಿಜಿಸಿಎ ಯೂ ಟರ್ನ್‌

ಭ್ರಷ್ಟಾಚಾರ ನಮ್ಮ ಕಾಲದ್ದಾ, ನಿಮ್ಮ ಕಾಲದ್ದಾ: ಸಿದ್ದರಾಮಯ್ಯಗೆ ದಾಖಲೆ ನೀಡಿದ ಆರ್ ಅಶೋಕ್

ಬಿಜೆಪಿ ಪಾಪದ ಗಂಟನ್ನು ನಮ್ಮ ತಲೆಗೆ ಕಟ್ಟಲು ಹೊರಟಿದೆ: ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments