Webdunia - Bharat's app for daily news and videos

Install App

ಕಾರುಗಳ ಮುಖಾಮುಖಿ ಡಿಕ್ಕಿ; ಮಡಿಕೇರಿ ನಿವಾಸಿ ಮೃತ್ಯು - ಹಲವು ಜನರಿಗೆ ಗಂಭೀರ ಗಾಯ

Webdunia
ಸೋಮವಾರ, 21 ಫೆಬ್ರವರಿ 2022 (18:03 IST)
ಮಾಣಿ-ಮೈಸೂರು ರಸ್ತೆಯ ಪುತ್ತೂರು ತಾಲ್ಲೂಕಿನ ಕಾವು ಸಮೀಪದ ಕೌಡಿಚ್ಚಾರ್ ಮದ್ಯಂಗಲ ಎಂಬಲ್ಲಿ ಕಾರುಗಳೆರಡು ಮುಖಾಮುಖಿ ಡಿಕ್ಕಿಯಾಗಿ ಮಡಿಕೇರಿ ನಿವಾಸಿ ಮೃತ ಪಟ್ಟು ಇಬ್ಬರು ತೀವ್ರ ಗಾಯಗೊಂಡಿರುವ ಘಟನೆ ಫೆ.20 ರಂದು ನಡೆದಿದೆ.
ಮಡಿಕೇರಿಯಿಂದ ಮಂಗಳೂರಿಗೆ ಆಗಮಿಸುತ್ತಿದ್ದ ಸ್ವಿಫ್ಟ್ ಕಾರು ಮತ್ತು ಮಡಿಕೇರಿ ಕಡೆ ಹೋಗುತ್ತಿದ್ದ ಐ20 ಕಾರು ನಡುವೆ ಅಪಘಾತ ಸಂಭವಿಸಿದೆ.
ವ್ಯಕ್ತಿ ವ್ಯಕ್ತಿಯನ್ನು ಮಡಿಕೇರಿ ನಿವಾಸಿ ರಾಜು ಎಂದು ಗುರುತಿಸಲಾಗಿದೆ.
ಸ್ವಿಫ್ಟ್ ಕಾರಿನ ಚಾಲಕನನ್ನು ಮಂಗಳೂರಿನ ಕೈಕಂಬ ಮೊಯಿದ್ದಿನ್ ಕುಂಜಿ ಎಂದು ಗುರುತಿಸಲಾಗಿದೆ.
ಮಂಗಳೂರಿನ ಬಜ್ಪೆ ಮೂಲದ ಕುಟುಂಬ ಮಡಿಕೇರಿ ಪ್ರವಾಸಿ ತಾಣಗಳಿಗೆ ತೆರಳಿದ್ದು ಮರಳಿ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಬಜ್ಪೆ ಮೂಲದ ಜ್ಯೋತಿ ಎಂಬವರು ಗಂಭೀರ ಗಾಯಗೊಂಡಿದ್ದು ದೀಪಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
 
 
ಕಾರಿನಲ್ಲಿದ್ದ ನೇತ್ರಾವತಿ, ಬೇಬಿ ಪೂಜಾರಿ, ಚೇತನ್ ಎಂಬವರಿಗೆ ಅಲ್ಪ-ಸ್ವಲ್ಪ ಗಾಯವಾಗಿದ್ದು, ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments