Select Your Language

Notifications

webdunia
webdunia
webdunia
webdunia

ಬೆಂಕಿ ಹೇಳಿಕೆ ಬಿಎಸ್‌ವೈ ವಿರುದ್ಧ ದೂರು ದಾಖಲು

ಬೆಂಕಿ ಹೇಳಿಕೆ ಬಿಎಸ್‌ವೈ ವಿರುದ್ಧ ದೂರು ದಾಖಲು
ಬೆಂಗಳೂರು , ಶನಿವಾರ, 15 ಜುಲೈ 2017 (17:25 IST)
ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್‌ರನ್ನು ಬಂಧಿಸಿದಲ್ಲಿ ರಾಜ್ಯವೇ ಹೊತ್ತಿ ಉರಿಯುತ್ತದೆ ಎಂದು ಹೇಳಿಕೆ ನೀಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧ ದೂರು ದಾಖಲಾಗಿದೆ.
 
ಆರ್‌ಟಿಐ ಕಾರ್ಯಕರ್ತ ಹನುಮೇಗೌಡ ಎನ್ನುವವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗಲಭೆಯಾದ ಸಂದರ್ಭದಲ್ಲಿ ಯಡಿಯೂರಪ್ಪ ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ ಎಂದು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ
 
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆಯ ನಂತರ ಯಡಿಯೂರಪ್ಪ, ಗಲಭೆಯನ್ನು ಶಾಂತಿಗೊಳಿಸುವಂತಹ ಹೇಳಿಕೆ ನೀಡುವುದು ಬಿಟ್ಟು ಪ್ರಚೋದನಾಕಾರಿ ಹೇಳಿಕೆ ನೀಡಿದ್ದರು ಎಂದು ದೂರಿನಲ್ಲಿ ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಸರಕಾರದ ಭ್ರಷ್ಟಾಚಾರ ಸಾಬೀತುಪಡಿಸಿ: ಕಮಲ್‌ಹಾಸನ್‌ಗೆ ಸಚಿವನ ಸವಾಲ್