Webdunia - Bharat's app for daily news and videos

Install App

ನಗರದ ಖಾಸಗಿ ಹೋಟೆಲ್ ನಲ್ಲಿ ಪುಂಡಾಟ ಪ್ರಕರಣ

Webdunia
ಗುರುವಾರ, 11 ನವೆಂಬರ್ 2021 (20:20 IST)
ಬೆಂಗಳೂರು: ನಗರದ ಖಾಸಗಿ ಹೋಟೆಲ್ ನಲ್ಲಿ ನಡೆದ ವಿಷ್ಣು ಭಟ್, ಶ್ರೀಕೃಷ್ಣನ ಪುಂಡಾಟ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನೂ ಪೊಲೀಸರು ಬಂಧಿಸಿ ಅನೇಕ ವಿಚಾರಗಳ ಬಗ್ಗೆ ಬಾಯ್ಬಿಡಿಸುತ್ತಿದ್ದಾರೆ. ಈಗ ವಿಷ್ಣು ಭಟ್‌ಗೂ ಶ್ರೀಕೃಷ್ಣಗೂ ಏನು ಸಂಬಂಧ, ಕುಡಿದ ನಶೆಯಲ್ಲಿ ಸ್ಟಾರ್ ಹೋಟೆಲ್ ಗೆ ಶ್ರೀಕೀಯನ್ನ ವಿಷ್ಣು ಹುಡುಕಿ ಬಂದದ್ದು ಏಕೆ? ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ.
ಬೆಂಗಳೂರಿನ ಜೆ.ಬಿ.ನಗರ ಠಾಣೆ ಪೊಲೀಸರು ವಿಷ್ಣು ಭಟ್ ನನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಡ್ರಗ್ಸ್ ನಶೆಯಲ್ಲಿ ವಿಷ್ಣು ಭಟ್ ಹೋಟೆಲ್‌ಗೆ ಹೋಗಿದ್ದ. ಆದರೆ, ಯಾವ ಕಾರಣಕ್ಕೆ ಶ್ರೀಕೃಷ್ಣನಿಗಾಗಿ ವಿಷ್ಣು ಭಟ್ ಹೋಗಿದ್ದನು ಎಂಬ ಬಗ್ಗೆ ಸುಳಿವು ಸಿಕ್ಕಿರಲಿಲ್ಲ. ಹೀಗಾಗಿ ಈ ಬಗ್ಗೆ ಜೆ.ಬಿ.ನಗರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸದ್ಯ ಪೋಲಿಸರ ವಿಚಾರಣೆ ವೇಳೆ ಡ್ರಗ್ಸ್ ಪೂರೈಸಿದ ವ್ಯಕ್ತಿ ಬಗ್ಗೆ ವಿಷ್ಣು ಭಟ್ ಮಾಹಿತಿ ಬಾಯ್ಬಿಟ್ಟಿದ್ದಾನೆ. ಡ್ರಗ್ಸ್ ಪೂರೈಸುತ್ತಿದ್ದ ಪೆಡ್ಲರ್‌ಗಾಗಿ ಪೊಲೀಸರು ಶೋಧಕಾರ್ಯ ನಡೆಸುತ್ತಿದ್ದಾರೆ.
ಹ್ಯಾಕರ್ ಶ್ರೀಕಿ ಅಲಿಯಾಸ್ ಶ್ರೀಕೃಷ್ಣನ ಮೇಲೆ ಅನುಮಾನ
ಇನ್ನು ಮತ್ತೊಂದೆಡೆ ಹ್ಯಾಕರ್ ಶ್ರೀಕಿ ಅಲಿಯಾಸ್ ಶ್ರೀಕೃಷ್ಣ ಮತ್ತೆ ತನ್ನ ಹಳೇ ಚಾಳಿ ಮುಂದುವರಿಸಿದ್ದಾನಾ ಎಂಬ ಅನುಮಾನ ವ್ಯಕ್ತವಾಗಿದೆ. ಇದೇ ಕಾರಣಕ್ಕೆ ಹೋಟೆಲ್‌ಗೆ ಹೋಗಿರಬಹುದೆಂಬ ಅನುಮಾನ ಹುಟ್ಟಿಕೊಂಡಿದೆ. ಹೋಟೆಲ್ ರೂಂನಲ್ಲಿದ್ದ ಲ್ಯಾಪ್‌ಟಾಪ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶ್ರೀಕೃಷ್ಣನ ಲ್ಯಾಪ್‌ಟಾಪ್ ರಿಟ್ರೀವ್‌ಗೆ ಪೊಲೀಸರು ನ್ಯಾಯಾಲಯದ ಅನುಮತಿ ಪಡೆದಿದ್ದಾರೆ. ಶ್ರೀಕೃಷ್ಣನ ಲ್ಯಾಪ್‌ಟಾಪ್ ರಿಟ್ರೀವ್ ವೇಳೆ ಕ್ರಿಪ್ಟೋ ಕರೆನ್ಸಿ, ಬಿಟ್ ಕಾಯಿನ್ ವ್ಯವಹಾರ ಕಂಡು ಬಂದರೆ ಪೊಲೀಸರು ಶ್ರೀಕಿಗೆ ಮತ್ತೆ ಚಳಿಬಿಡಿಸಲಿದ್ದಾರೆ.
ಶ್ರೀಕಿ ಈ ಹಿಂದೆ ಹಲವು ಬಾರಿ ಸ್ಟಾರ್ ಹೋಟೆಲ್ ನಲ್ಲಿ ತಂಗಿದ್ದಾಗ ಇದೇ ಕೃತ್ಯ ಎಸಗಿದ್ದ. ಸರ್ಕಾರದ ಇ-ಪ್ರಕ್ಯೂರ್ ಮೆಂಟ್ ವೆಬ್ ಸೈಟ್ ಸೇರಿದಂತೆ ಪ್ರತಿಷ್ಟಿತ ಕಂಪೆನಿಗಳ ಡಾಟಾ ಕದ್ದಿದ್ದ. ಬಳಿಕ ಬ್ಲಾಕ್ ಮೇಲ್ ಮಾಡಿದ್ದರ ಬಗ್ಗೆ ಸಿಸಿಬಿ ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಿತ್ತು. ಕಳೆದ ಫೆಬ್ರವರಿಯಲ್ಲಿ 1 ನೇ ಎಸಿಎಂಎಂ ನ್ಯಾಯಾಲಯಕ್ಕೆ ಸಲ್ಲಿಸಿದ ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿತ್ತು. ಈ ಹಿನ್ನೆಲೆ ಶ್ರೀಕಿ ಲ್ಯಾಪ್ ಟಾಪ್ ರಿಟ್ರೀವ್ ಮಾಡಲಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments