Webdunia - Bharat's app for daily news and videos

Install App

ಗ್ರಾಮ ಲೆಕ್ಕಾಧಿಕಾರಿಯ ಮೇಲೆ ಲಾರಿ ಹರಿಸಿರುವ ಪ್ರಕರಣ; ಕಾಂಗ್ರೆಸ್​ ಶಾಸಕನಿಂದ ವಿವಾದಾತ್ಮಕ ಹೇಳಿಕೆ

Webdunia
ಬುಧವಾರ, 26 ಡಿಸೆಂಬರ್ 2018 (06:40 IST)
ರಾಯಚೂರು : ಗ್ರಾಮ ಲೆಕ್ಕಾಧಿಕಾರಿ ಸಾಹೇಬ್​ ಪಟೇಲ್ ಮೇಲೆ ದಂಧೆಕೋರರು ಲಾರಿ ಹರಿಸಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಲಿಂಗಸುಗೂರು ಕ್ಷೇತ್ರದ ಕಾಂಗ್ರೆಸ್​ ಶಾಸಕ ದುರ್ಗಪ್ಪ ಎಸ್. ಹೂಲಗೇರಿ, ‘ಗ್ರಾಮಲೆಕ್ಕಾಧಿಕಾರಿಯ ಹತ್ಯೆಯಲ್ಲ ಅದು ಅಸಹಜ ಸಾವಾಗಿದ್ದು, ಅವರು ಕಾಲು ಜಾರಿ ಮೃತಪಟ್ಟಿದ್ದಾರೆಂದು ವಿವಾದತ್ಮಕ ಹೇಳಿಕೆ ನೀಡಿದ್ದಾರೆ.


ತುಂಗಭದ್ರಾ ನದಿಯಿಂದ ಅಕ್ರಮವಾಗಿ ಮರಳು ಸಾಗಿಸುತ್ತಿರುವಾಗ ತಡೆಯಲು ಹೋದ ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಚೀಕಪರ್ವಿಯ ಗ್ರಾಮಲೆಕ್ಕಾಧಿಕಾರಿ ಸಾಹೇಬ್ ಪಟೇಲ್ ಮೇಲೆ ದಂಧೆಕೋರರು ಲಾರಿ ಹರಿಸಿರುವ ಕಾರಣ ಅವರ ಸ್ಥಳದಲ್ಲೇ ಸಾವನಪ್ಪಿದ್ದಾರೆ.


ಈ ಬಗ್ಗೆ ಮಾತನಾಡಿದ ಶಾಸಕ ದುರ್ಗಪ್ಪ ಎಸ್. ಹೂಲಗೇರಿ, ಗ್ರಾಮ ಲೆಕ್ಕಾಧಿಕಾರಿ ಸಾಹೇಬ್ ಪಟೇಲ್ ಅವರದ್ದು ಅಸಹಜ ಸಾವು ಎನ್ನುವ ಮಾಹಿತಿಯಿದೆ. ಮರಳು ಲಾರಿ ತಡೆಯಲು ಹೋದಾಗ ಲಾರಿ ಮುಂದಕ್ಕೆ ಹೋಗಿದೆ. ಈ ವೇಳೆ ಕಾಲು ಜಾರಿ ಹಿಂದಿನ ಗಾಲಿಗೆ ಬಿದ್ದು ಅಧಿಕಾರಿ ಸಾವನ್ನಪ್ಪಿದ್ದಾನೆಂದು ಹೇಳಿದ್ದಾರೆ.


ಶಾಸಕರ ಹೇಳಿಕೆಯ ಬಗ್ಗೆ ಸಾರ್ವಜನಿಕ ವಲಯದಿಂದ  ತೀವ್ರ ವಿರೋಧ ವ್ಯಕ್ತವಾಗಿದ್ದು ಶಾಸಕರು ಪ್ರಕರಣದ ದಿಕ್ಕು ತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾರೆಂದು ಸ್ಥಳೀಯ ಹೋರಾಟಗಾರರು ಆರೋಪಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments