Webdunia - Bharat's app for daily news and videos

Install App

ಗ್ರಾಮ ಲೆಕ್ಕಾಧಿಕಾರಿಯ ಮೇಲೆ ಲಾರಿ ಹರಿಸಿರುವ ಪ್ರಕರಣ; ಕಾಂಗ್ರೆಸ್​ ಶಾಸಕನಿಂದ ವಿವಾದಾತ್ಮಕ ಹೇಳಿಕೆ

Webdunia
ಬುಧವಾರ, 26 ಡಿಸೆಂಬರ್ 2018 (06:40 IST)
ರಾಯಚೂರು : ಗ್ರಾಮ ಲೆಕ್ಕಾಧಿಕಾರಿ ಸಾಹೇಬ್​ ಪಟೇಲ್ ಮೇಲೆ ದಂಧೆಕೋರರು ಲಾರಿ ಹರಿಸಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಲಿಂಗಸುಗೂರು ಕ್ಷೇತ್ರದ ಕಾಂಗ್ರೆಸ್​ ಶಾಸಕ ದುರ್ಗಪ್ಪ ಎಸ್. ಹೂಲಗೇರಿ, ‘ಗ್ರಾಮಲೆಕ್ಕಾಧಿಕಾರಿಯ ಹತ್ಯೆಯಲ್ಲ ಅದು ಅಸಹಜ ಸಾವಾಗಿದ್ದು, ಅವರು ಕಾಲು ಜಾರಿ ಮೃತಪಟ್ಟಿದ್ದಾರೆಂದು ವಿವಾದತ್ಮಕ ಹೇಳಿಕೆ ನೀಡಿದ್ದಾರೆ.


ತುಂಗಭದ್ರಾ ನದಿಯಿಂದ ಅಕ್ರಮವಾಗಿ ಮರಳು ಸಾಗಿಸುತ್ತಿರುವಾಗ ತಡೆಯಲು ಹೋದ ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಚೀಕಪರ್ವಿಯ ಗ್ರಾಮಲೆಕ್ಕಾಧಿಕಾರಿ ಸಾಹೇಬ್ ಪಟೇಲ್ ಮೇಲೆ ದಂಧೆಕೋರರು ಲಾರಿ ಹರಿಸಿರುವ ಕಾರಣ ಅವರ ಸ್ಥಳದಲ್ಲೇ ಸಾವನಪ್ಪಿದ್ದಾರೆ.


ಈ ಬಗ್ಗೆ ಮಾತನಾಡಿದ ಶಾಸಕ ದುರ್ಗಪ್ಪ ಎಸ್. ಹೂಲಗೇರಿ, ಗ್ರಾಮ ಲೆಕ್ಕಾಧಿಕಾರಿ ಸಾಹೇಬ್ ಪಟೇಲ್ ಅವರದ್ದು ಅಸಹಜ ಸಾವು ಎನ್ನುವ ಮಾಹಿತಿಯಿದೆ. ಮರಳು ಲಾರಿ ತಡೆಯಲು ಹೋದಾಗ ಲಾರಿ ಮುಂದಕ್ಕೆ ಹೋಗಿದೆ. ಈ ವೇಳೆ ಕಾಲು ಜಾರಿ ಹಿಂದಿನ ಗಾಲಿಗೆ ಬಿದ್ದು ಅಧಿಕಾರಿ ಸಾವನ್ನಪ್ಪಿದ್ದಾನೆಂದು ಹೇಳಿದ್ದಾರೆ.


ಶಾಸಕರ ಹೇಳಿಕೆಯ ಬಗ್ಗೆ ಸಾರ್ವಜನಿಕ ವಲಯದಿಂದ  ತೀವ್ರ ವಿರೋಧ ವ್ಯಕ್ತವಾಗಿದ್ದು ಶಾಸಕರು ಪ್ರಕರಣದ ದಿಕ್ಕು ತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾರೆಂದು ಸ್ಥಳೀಯ ಹೋರಾಟಗಾರರು ಆರೋಪಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

ಮುಂದಿನ ಸುದ್ದಿ
Show comments