ಕ್ವಾರಂಟೈನ್ ಉಲ್ಲಂಘಿಸಿದ ನಾಲ್ವರ ಮೇಲೆ ಕೇಸ್

Webdunia
ಮಂಗಳವಾರ, 2 ಜೂನ್ 2020 (21:18 IST)
ಕ್ವಾರಂಟೈನ್ ನಲ್ಲಿ ಇರುವಂತೆ ತಿಳಿಸಿದ್ದರೂ ಉಲ್ಲಂಘನೆ ಮಾಡಿದ ನಾಲ್ವರ ವಿರುದ್ಧ ಕೇಸ್ ದಾಖಲಾಗಿದೆ.

ಹೊರ ರಾಜ್ಯದಿಂದ ಆಗಮಿಸಿದ ವಲಸೆಗಾರರಿಗೆ ಹೋಂ ಕ್ವಾರಂಟೈನ್‌ನಲ್ಲಿ ಇರುವಂತೆ ಸೂಚನೆ ನೀಡಿದರೂ ಸರ್ಕಾರದ ಆದೇಶವನ್ನು ಪಾಲಿಸದೆ ಕೊರೊನಾ ವೈರಸ್ ಸಾಂಕ್ರಾಮಿಕ ರೋಗವನ್ನು ಹರಡಿಸುವ ದುರುದ್ದೇಶದಿಂದ ತಾಂಡಾದಲ್ಲಿ ತಿರುಗಾಡುವುದು ಕಂಡುಬಂದಿದೆ.

ಈ ಪ್ರಯುಕ್ತ ಯಾದಗಿರಿ ಜಿಲ್ಲೆಯ ವಡಗೇರಾ ತಾಲ್ಲೂಕಿನ ಬೀರನಕಲ್ ತಾಂಡಾ ಮತ್ತು ಕಮಲನಾಯಕ ತಾಂಡಾದ 4 ಜನರ ಮೇಲೆ ಪ್ರಕರಣ ದಾಖಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ್ ತಿಳಿಸಿದ್ದಾರೆ.

ಹೊರ ರಾಜ್ಯದಿಂದ ಆಗಮಿಸಿದ ವಲಸೆಗಾರರನ್ನು ಕಡ್ಡಾಯವಾಗಿ ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ ಇರಿಸಲಾಗುತ್ತಿದೆ. ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ ನಿಗದಿತ ಅವಧಿ ಮುಕ್ತಾಯಗೊಂಡ ನಂತರ ಹೋಂ ಕ್ವಾರಂಟೈನ್ ಅವಲೋಕನೆಗಾಗಿ ಕೇಂದ್ರ, ರಾಜ್ಯ ಸರ್ಕಾರದ ಮಾರ್ಗಸೂಚಿ ಹಾಗೂ ಶಿಷ್ಟಾಚಾರದಂತೆ ಸ್ಟಾಂಪಿಂಗ್ ಮತ್ತು ಹೆಲ್ತ್ ಸ್ಕ್ರೀನಿಂಗ್ ಮಾಡಿ ಹೋಂ ಕ್ವಾರಂಟೈನ್‌ಗಾಗಿ ಕಳುಹಿಸಲಾಗುತ್ತಿದೆ. ಆದರೆ ವಡಗೇರಾ ತಾಲ್ಲೂಕಿನ ಬೀರನಕಲ್ ತಾಂಡಾ ಮತ್ತು ಕಮಲನಾಯಕ ತಾಂಡಾದ 4 ಜನರು ಹೋಂ ಕ್ವಾರಂಟೈನ್ ಉಲ್ಲಂಘಿಸಿದ್ದಾರೆ.

ಆರೋಪಿಗಳ ಮೇಲೆ ಕೇಸ್ ನಂಬರ್: 69/2020, ಕಲಂ: 188, 269, 270 ಐಪಿಸಿ ಅಡಿಯಲ್ಲಿ ವಡಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟೆಹ್ರಾನ್‌ನ ಕಮಾಂಡ್ ಸೆಂಟರ್‌ಗಳನ್ನೇ ಪುಡಿ ಮಾಡಿದ ಇಸ್ರೇಲ್‌

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪೆನ್‌ಡ್ರೈವ್ ಹಂಚಿಕೆ ಕೇಸ್‌, ಮಹತ್ವದ ಬೆಳವಣಿಗೆ

ನನಗೆ ನಯನತಾರಾ ಬೇಕು, ಕನಸು ಈಡೇರಿಸುವಿರಾ: ವಿವಾದ ಸೃಷ್ಟಿಸಿದ ಎಐಎಂಡಿಎಂಕೆ ಸಂಸದ ಷಣ್ಮುಗಂ ಹೇಳಿಕೆ

ಇಂದೋರ್‌ ವಸತಿ ಕಟ್ಟಡದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ, 7ಮಂದಿ ಸಜೀವ ದಹನ, Video

ಪಶ್ಚಿಮ ಏಷ್ಯಾ ಸಂಘರ್ಷ: ತಾಯ್ನಾಡಿಗೆ ಮರಳಿದ 2.44ಲಕ್ಷ ಭಾರತೀಯರು

ಮುಂದಿನ ಸುದ್ದಿ
Show comments