Select Your Language

Notifications

webdunia
webdunia
webdunia
webdunia

ದನದ ಓಣಿಯನ್ನೂ ಬಿಡದ ರಾಜಕೀಯ

ದನದ ಓಣಿಯನ್ನೂ ಬಿಡದ ರಾಜಕೀಯ
ಬೆಳಗಾವಿ , ಗುರುವಾರ, 3 ಅಕ್ಟೋಬರ್ 2019 (17:01 IST)
ದನದ ಓಣಿ ಮೇಲೆ ಕೇಸ್ ದಾಖಲಾಗಿರೋದಕ್ಕೆ ಆಕ್ರೋಶ ವ್ಯಕ್ತವಾಗತೊಡಗಿದೆ.

ಬೆಳಗಾವಿ ಜಿಲ್ಲೆಯ ಗೋಕಾಕ ನಗರದ ದನದ ಓಣಿಗೆ ವಿದ್ಯುತ್ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗಿತ್ತು. ಆದರೆ ಪ್ರತಿಭಟನೆ ನಡೆಸಿದವರ ಮೇಲೆ 107 ರ ಕಾಯ್ದೆಯಡಿ ಕೇಸು ದಾಖಲಿಸಲಾಗಿದೆ. ಕೇಸ್ ನ್ನು ಹಿಂತೆಗೆದುಕೊಳ್ಳಬೇಕೆಂದು ಆಗ್ರಹ ಕೇಳಿಬಂದಿದೆ. ಈ ಕುರಿತು ಬಿಜೆಪಿ ಮುಖಂಡ ಅಶೋಕ ಪೂಜಾರಿ ನೇತೃತ್ವದಲ್ಲಿ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ.

ಗೋಕಾಕ್ ಫಾಲ್ಸ್ ಗೆ ಹೊಂದಿಕೊಂಡಿರುವ ದನದ ಓಣಿಯ ನಿವಾಸಿಗಳು ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಆಗಮಿಸಿದ್ರು. ಸುಮಾರು 500 ಕುಟುಂಬಗಳು ವಾಸವಾಗಿರುವ ಈ ಪ್ರದೇಶಕ್ಕೆ ವಿದ್ಯುತ್ ಕಲ್ಪಿಸುವಂತೆ ಒತ್ತಾಯಿಸಿದ್ರು ಈಚೆಗೆ ಪ್ರತಿಭಟನೆ ನಡೆಸಲಾಗಿತ್ತು.

ಆದರೆ ರಾಜಕೀಯ ಪ್ರೇರಿತ ಗುಂಪೊಂದು ಪ್ರತಿಭಟನಾಕಾರರರೊಂದಿಗೆ ಗಲಾಟೆ ಮಾಡಿ ಪ್ರತಿಭಟನೆ ಹತ್ತಿಕ್ಕಲು ಪ್ರಯತ್ನಿಸಿದ್ದರು. ಓಣಿ ನಿವಾಸಿಗಳ ಮೇಲೆ 107 ರ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಕೇಸ್ ಕೈಬಿಡುವಂತೆ ಒತ್ತಾಯ ಮಾಡಿದ್ದಾರೆ.



 


Share this Story:

Follow Webdunia kannada

ಮುಂದಿನ ಸುದ್ದಿ

ತೆರಿಗೆ ಸಲಹೆಗಾರರ ದಿನ : ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರಾಜ್ಯ ಪ್ರವಾಸ