ಡಾಬಾ ಮೇಲೆ ಅಪರಿಚಿತರು ದಾಳಿ ಕ್ಯಾಶಿಯರ್ ಸಾವು

Webdunia
ಮಂಗಳವಾರ, 28 ಡಿಸೆಂಬರ್ 2021 (16:19 IST)
ಊಟ ಮಾಡಿದ್ದಕ್ಕೆ ದುಡ್ಡು ಕೊಡಿ ಎಂದಿದ್ದಕ್ಕೆ ಪೆಟ್ರೋಲ್ ಎರಚಿ ಬೆಂಕಿ ಇಟ್ಟಿದ್ದ ದುಷ್ಕರ್ಮಿಗಳ ಕೃತ್ಯದಿಂದ ಕ್ಯಾಷಿಯರ್ ಪ್ರಾಣ ಹೋಗಿದೆ. ಕಿಡಿಗೇಡಿಗಳ ದಾಳಿಗೆ ಒಳಗಾಗಿ ಜೀವ್ಮನರಣ ಹೋರಾಟ ನಡೆಸುತ್ತಿದ್ದ ಯುವಕ ಇಂದು ಕೊನೆಯುಸಿರೆಳೆದಿದ್ದಾನೆ.
ಹಾಸನ ಮೂಲದ ಹೆಸರುಘಟ್ಟ ದೊಡ್ಡಬ್ಯಾಲೇಕೆರೆ ನಿವಾಸಿ ಮನೋಜ್ (29) ಸಾವಿಗೀಡಾದ ವ್ಯಕ್ತಿ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದ ಈ ವ್ಯಕ್ತಿ, ಚಿಂತಾಜನಕ ಸ್ಥಿತಿಯಲ್ಲಿದ್ದು, ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾನೆ. ಈತ ಬೆಂಗಳೂರು ಉತ್ತರ ತಾಲ್ಲೂಕು ದೊಡ್ಡಬ್ಯಾಲಕೆರೆಯ ಯು-ಟರ್ನ್ ಢಾಬಾದಲ್ಲಿ ಕ್ಯಾಷಿಯರ್ ಆಗಿದ್ದು, ಗುರುವಾರ ತಡರಾತ್ರಿ ದುಷ್ಕರ್ಮಿಗಳಿಂದ ದಾಳಿಗೆ ಒಳಗಾಗಿದ್ದ.
ತಡರಾತ್ರಿ 10.30ಕ್ಕೆ ಇಬ್ಬರು ವ್ಯಕ್ತಿಗಳು ಊಟಕ್ಕೆ ಬಂದಿದ್ದರು. ಊಟ ಮಾಡಿ ಬಹಳ ಹೊತ್ತು ಮಾತನಾಡುತ್ತ ಕುಳಿತಿದ್ದಾಗ ಡಾಬಾದ ನೌಕರರು ಬಾಗಿಲು ಮುಚ್ಚಬೇಕು. ಬಿಲ್ ಕೊಡುವಂತೆ ಕೇಳಿದ್ದರು. ಇದರಿಂದ ಆಕ್ರೋಶಗೊಂಡ ಅಪರಿಚಿತರು ಸಪ್ಲೈಯರ್‌ಗೆ ಬೈದು ತೆರಳಿದ್ದರು.
ಬಳಿಕ ಮಧ್ಯರಾತ್ರಿ 12.30ಕ್ಕೆ ಡಾಬಾ ಬಳಿ ದ್ವಿಚಕ್ರ ವಾಹನದಲ್ಲಿ ವಾಪಸ್ ಬಂದ ಅಪರಿಚಿತರು, ತಾವು ತಂದಿದ್ದ ಪೆಟ್ರೋಲನ್ನು ಢಾಬಾ ಬಾಗಿಲಿಗೆ ಸುರಿದು ಅದರ ಚಿಲಕ ಹಾಕಿ ಬೆಂಕಿ ಹಚ್ಚಿದ್ದರು. ಒಳಗಡೆ ಊಟ ಮಾಡುತ್ತಿದ್ದ ಮನೋಜ್ ಬೆಂಕಿಯನ್ನು ಕಂಡು ಶಾರ್ಟ್ ಸರ್ಕ್ಯೂಟ್ ಆಗಿರಬಹುದು ಎಂದು ಭಾವಿಸಿ ಬಾಗಿಲ ಬಳಿಗೆ ಓಡಿ ಬಂದಿದ್ದ. ಆರೋಪಿಗಳು ಎರಚುತ್ತಿದ್ದ ಪೆಟ್ರೋಲ್ ಮನೋಜ್ ಮೇಲೆ ಬಿದ್ದು, ಆತನ ಮೈಗೂ ಬೆಂಕಿ ಹತ್ತಿಕೊಂಡಿತ್ತು. ಕೂಡಲೇ ಇತರ ಕಾರ್ಮಿಕ ಮನೋಜ್ ಮೈಗೆ ತಾಗಿದ್ದ ಬೆಂಕಿ ನಂದಿಸಿ ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಅಕ್ಕನನ್ನು ಮಾರಾಟ ಮಾಡ್ಬೇಡಿ, ಅಕ್ಕನ ಮಾತು ಕೇಳಿದ್ರೆ ಕಣ್ಣೀರು ಬರುತ್ತೆ

ವಿಧಾನಸಭೆ ಚುನಾವಣೆ, ಬಿಹಾರದಲ್ಲಿ ರಾಹುಲ್ ಗಾಂಧಿ ಮೊದಲ ರ್ಯಾಲಿ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮಹತ್ವದ ಪೋಸ್ಟ್ ಹಂಚಿಕೊಂಡ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌

ತನ್ನವರನ್ನು ಕಳೆದುಕೊಂಡ ಸಂತ್ರಸ್ತರ ಕುಟುಂಬದ ಜತೆ ವಿಜಯ್ ನಡೆ ಹೇಗಿತ್ತು ಗೊತ್ತಾ

ಮುಂದಿನ ಸುದ್ದಿ
Show comments