Webdunia - Bharat's app for daily news and videos

Install App

ಡಾಬಾ ಮೇಲೆ ಅಪರಿಚಿತರು ದಾಳಿ ಕ್ಯಾಶಿಯರ್ ಸಾವು

Webdunia
ಮಂಗಳವಾರ, 28 ಡಿಸೆಂಬರ್ 2021 (16:19 IST)
ಊಟ ಮಾಡಿದ್ದಕ್ಕೆ ದುಡ್ಡು ಕೊಡಿ ಎಂದಿದ್ದಕ್ಕೆ ಪೆಟ್ರೋಲ್ ಎರಚಿ ಬೆಂಕಿ ಇಟ್ಟಿದ್ದ ದುಷ್ಕರ್ಮಿಗಳ ಕೃತ್ಯದಿಂದ ಕ್ಯಾಷಿಯರ್ ಪ್ರಾಣ ಹೋಗಿದೆ. ಕಿಡಿಗೇಡಿಗಳ ದಾಳಿಗೆ ಒಳಗಾಗಿ ಜೀವ್ಮನರಣ ಹೋರಾಟ ನಡೆಸುತ್ತಿದ್ದ ಯುವಕ ಇಂದು ಕೊನೆಯುಸಿರೆಳೆದಿದ್ದಾನೆ.
ಹಾಸನ ಮೂಲದ ಹೆಸರುಘಟ್ಟ ದೊಡ್ಡಬ್ಯಾಲೇಕೆರೆ ನಿವಾಸಿ ಮನೋಜ್ (29) ಸಾವಿಗೀಡಾದ ವ್ಯಕ್ತಿ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದ ಈ ವ್ಯಕ್ತಿ, ಚಿಂತಾಜನಕ ಸ್ಥಿತಿಯಲ್ಲಿದ್ದು, ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾನೆ. ಈತ ಬೆಂಗಳೂರು ಉತ್ತರ ತಾಲ್ಲೂಕು ದೊಡ್ಡಬ್ಯಾಲಕೆರೆಯ ಯು-ಟರ್ನ್ ಢಾಬಾದಲ್ಲಿ ಕ್ಯಾಷಿಯರ್ ಆಗಿದ್ದು, ಗುರುವಾರ ತಡರಾತ್ರಿ ದುಷ್ಕರ್ಮಿಗಳಿಂದ ದಾಳಿಗೆ ಒಳಗಾಗಿದ್ದ.
ತಡರಾತ್ರಿ 10.30ಕ್ಕೆ ಇಬ್ಬರು ವ್ಯಕ್ತಿಗಳು ಊಟಕ್ಕೆ ಬಂದಿದ್ದರು. ಊಟ ಮಾಡಿ ಬಹಳ ಹೊತ್ತು ಮಾತನಾಡುತ್ತ ಕುಳಿತಿದ್ದಾಗ ಡಾಬಾದ ನೌಕರರು ಬಾಗಿಲು ಮುಚ್ಚಬೇಕು. ಬಿಲ್ ಕೊಡುವಂತೆ ಕೇಳಿದ್ದರು. ಇದರಿಂದ ಆಕ್ರೋಶಗೊಂಡ ಅಪರಿಚಿತರು ಸಪ್ಲೈಯರ್‌ಗೆ ಬೈದು ತೆರಳಿದ್ದರು.
ಬಳಿಕ ಮಧ್ಯರಾತ್ರಿ 12.30ಕ್ಕೆ ಡಾಬಾ ಬಳಿ ದ್ವಿಚಕ್ರ ವಾಹನದಲ್ಲಿ ವಾಪಸ್ ಬಂದ ಅಪರಿಚಿತರು, ತಾವು ತಂದಿದ್ದ ಪೆಟ್ರೋಲನ್ನು ಢಾಬಾ ಬಾಗಿಲಿಗೆ ಸುರಿದು ಅದರ ಚಿಲಕ ಹಾಕಿ ಬೆಂಕಿ ಹಚ್ಚಿದ್ದರು. ಒಳಗಡೆ ಊಟ ಮಾಡುತ್ತಿದ್ದ ಮನೋಜ್ ಬೆಂಕಿಯನ್ನು ಕಂಡು ಶಾರ್ಟ್ ಸರ್ಕ್ಯೂಟ್ ಆಗಿರಬಹುದು ಎಂದು ಭಾವಿಸಿ ಬಾಗಿಲ ಬಳಿಗೆ ಓಡಿ ಬಂದಿದ್ದ. ಆರೋಪಿಗಳು ಎರಚುತ್ತಿದ್ದ ಪೆಟ್ರೋಲ್ ಮನೋಜ್ ಮೇಲೆ ಬಿದ್ದು, ಆತನ ಮೈಗೂ ಬೆಂಕಿ ಹತ್ತಿಕೊಂಡಿತ್ತು. ಕೂಡಲೇ ಇತರ ಕಾರ್ಮಿಕ ಮನೋಜ್ ಮೈಗೆ ತಾಗಿದ್ದ ಬೆಂಕಿ ನಂದಿಸಿ ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments