ಮೀಸಲಾತಿ ಕಿಚ್ಚು ಜೋರು

Webdunia
ಶುಕ್ರವಾರ, 26 ನವೆಂಬರ್ 2021 (14:05 IST)
ಪ್ರವರ್ಗ 2ಎ ಗೆ ಪ್ರಬಲ ಜಾತಿಗಳನ್ನು ಸೇರಿಸಬೇಕು ಎನ್ನುವ ಬೇಡಿಕೆಯ ವಿರುದ್ದ ರಾಜ್ಯಾದ್ಯಂತ ಆಂದೋಲನ ನಡೆಸುವ ಒಕ್ಕೊರಲಿನ ತೀರ್ಮಾನವನ್ನು ಇಂದು ಕರ್ನಾಟಕ ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆಯ ಕಾರ್ಯಕಾರಣಿ ಸಭೆಯಲ್ಲಿ ತಗೆದುಕೊಳ್ಳಲಾಗಿದೆ ಎಂದು ಜಾಗೃತಿ ವೇದಿಕೆಯ ಅಧ್ಯಕ್ಷರಾದ ಎಂ.ಸಿ ವೇಣುಗೋಪಾಲ್‌ ತಿಳಿಸಿದರು.
 
ಇಂದು ಶಾಸಕರ ಭವನದ ಸಭಾಂಗಣದಲ್ಲಿ ನಡೆದಂತಹ ಅತಿ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆಯ ಕಾರ್ಯಕಾರಣಿ ಸಭೆಯ ನಂತರ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿದರು.ಪ್ರಬಲ ಜಾತಿಗಳು 2ಎ ಪ್ರವರ್ಗದಲ್ಲಿರುವ ಜಾತಿಗಳ ಮೀಸಲಾತಿಯನ್ನು ಕಬಳಿಸುವಂತಹ ಕೃತ್ಯಕ್ಕೆ ಮುಂದಾಗಿವೆ. ರಾಜಕೀಯವಾಗಿ, ಸಾಮಾಜಿಕವಾಗಿ ಒತ್ತಡ ಹೇರಲಾಗುತ್ತಿದೆ. ಇದರ ವಿರುದ್ದ ಕಳೆದ ಮಾರ್ಚ್‌ ತಿಂಗಳಿನಿಂದ ಬೆಂಗಳೂರು ನಗರ, ಮುಖ್ಯಮಂತ್ರಿಗಳು ಹಾಗೂ ಹಿಂದುಳಿದ ಆಯೋಗದ ಅಧ್ಯಕ್ಷರಿಗೆ ಹಲವಾರು ಬಾರಿ ಮನವಿಯನ್ನು ಸಲ್ಲಸಿದ್ದೇವೆ. ಆದರೆ, ಇದುವರೆಗೂ ನಮಗೆ ಸಕಾರಾತ್ಮಕವಾದಂತಹ ಪ್ರತಿಕ್ರಿಯೆ ಸಿಕ್ಕಿಲ್ಲ ಎಂದರು.
 
ನ್ಯಾಯಮೂರ್ತಿ ಆಡಿ ನೇತೃತ್ವದ ಸಮಿತಿಯನ್ನು ರದ್ದುಗೊಳಿಸಿ: ಪ್ರಬಲ ಜಾತಿಗಳನ್ನು 2ಎ ಪ್ರವರ್ಗಕ್ಕೆ ಸೇರಿಸುವ ನಿಟ್ಟಿನಲ್ಲಿ ನ್ಯಾಯಮೂರ್ತಿ ಆಡಿ ಅವರ ನೇತೃತ್ವದಲ್ಲಿ ರಚಿಸಲಾಗಿರುವ ಸಮಿತಿಯನ್ನು ರದ್ದುಗೊಳಿಸಬೇಕು. ಈ ಸಮಿತಿಯಲ್ಲಿ ಪ್ರಬಲ ಜಾತಿಗೆ ಸೇರಿದವರನ್ನೇ ಸದಸ್ಯರನ್ನಾಗಿಸಿದ್ದು, ಇವರಿಂದ ನ್ಯಾಯಯುತವಾದಂತಹ ವಿಚಾರಣೆ ಸಾಧ್ಯವಿಲ್ಲ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಿಭಟಿಸುತ್ತಿರುವ ವಿದ್ಯಾರ್ಥಿಗಳ ಬಗ್ಗೆ‌ ಕ್ರಿಕೆಟ್ ದೇವರು ಸಚಿನ್ ಮಹತ್ವದ ಪೋಸ್ಟ್‌

ಧರ್ಮೇಂದ್ರ ಪ್ರಧಾನ್‌ರನ್ನು ಕೆಳಗಿಳಿಸದಿದ್ದರೆ, ಮುಂದೆ ಪ್ರಧಾನಿ ರಾಜೀನಾಮೆಯೆ ನಮ್ಮ ಡಿಮ್ಯಾಂಡ್ ಆಗಿರುತ್ತೆ: ಅಭಿಜೀತ್

ಮದುವೆಯಾದವರು ಹನಿಮೂನ್‍ಗೆ ಒಂದು ಬಾರಿ ವಿದೇಶಕ್ಕೆ ತೆರಳಿದರೆ ರಾಹುಲ್ ಗಾಂಧಿ ಪದೇಪದೇ ಹೊರದೇಶಕ್ಕೆ ಹೋಗುತ್ತಾರೆ

ಕೊತ್ವಾಲ್ ರಾಮಚಂದ್ರ ಅವರ ಶಿಷ್ಯ ಏಡ್ಸ್ ಇಂಜೆಕ್ಷನ್ ತಲಗುಲಿಸಿದ ಮೇಲೆ ಅಶೋಕ್ ಗೆ ಬುದ್ಧಿ ಭ್ರಮಣೆಯಾಗಿದೆ: ಬಿಕೆ ಹರಿಪ್ರಸಾದ್

ರಾತ್ರಿ ಪೂರ್ತಿ ಅನಿಲ ಸೋರಿಕೆ, ಬೆಳಗೆದ್ದು ಲೈಟ್ ಆನ್ ಮಾಡುತ್ತಿದ್ದ ಹಾಗೇ ಆವರಿಸಿದ ಬೆಂಕಿ, ಮುಂದೆ ಆಗಿದ್ದು ಭಾರೀ ಅವಘಡ

ಮುಂದಿನ ಸುದ್ದಿ
Show comments