Webdunia - Bharat's app for daily news and videos

Install App

ಮೀಸಲಾತಿ ಕಿಚ್ಚು ಜೋರು

Webdunia
ಶುಕ್ರವಾರ, 26 ನವೆಂಬರ್ 2021 (14:05 IST)
ಪ್ರವರ್ಗ 2ಎ ಗೆ ಪ್ರಬಲ ಜಾತಿಗಳನ್ನು ಸೇರಿಸಬೇಕು ಎನ್ನುವ ಬೇಡಿಕೆಯ ವಿರುದ್ದ ರಾಜ್ಯಾದ್ಯಂತ ಆಂದೋಲನ ನಡೆಸುವ ಒಕ್ಕೊರಲಿನ ತೀರ್ಮಾನವನ್ನು ಇಂದು ಕರ್ನಾಟಕ ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆಯ ಕಾರ್ಯಕಾರಣಿ ಸಭೆಯಲ್ಲಿ ತಗೆದುಕೊಳ್ಳಲಾಗಿದೆ ಎಂದು ಜಾಗೃತಿ ವೇದಿಕೆಯ ಅಧ್ಯಕ್ಷರಾದ ಎಂ.ಸಿ ವೇಣುಗೋಪಾಲ್‌ ತಿಳಿಸಿದರು.
 
ಇಂದು ಶಾಸಕರ ಭವನದ ಸಭಾಂಗಣದಲ್ಲಿ ನಡೆದಂತಹ ಅತಿ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆಯ ಕಾರ್ಯಕಾರಣಿ ಸಭೆಯ ನಂತರ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿದರು.ಪ್ರಬಲ ಜಾತಿಗಳು 2ಎ ಪ್ರವರ್ಗದಲ್ಲಿರುವ ಜಾತಿಗಳ ಮೀಸಲಾತಿಯನ್ನು ಕಬಳಿಸುವಂತಹ ಕೃತ್ಯಕ್ಕೆ ಮುಂದಾಗಿವೆ. ರಾಜಕೀಯವಾಗಿ, ಸಾಮಾಜಿಕವಾಗಿ ಒತ್ತಡ ಹೇರಲಾಗುತ್ತಿದೆ. ಇದರ ವಿರುದ್ದ ಕಳೆದ ಮಾರ್ಚ್‌ ತಿಂಗಳಿನಿಂದ ಬೆಂಗಳೂರು ನಗರ, ಮುಖ್ಯಮಂತ್ರಿಗಳು ಹಾಗೂ ಹಿಂದುಳಿದ ಆಯೋಗದ ಅಧ್ಯಕ್ಷರಿಗೆ ಹಲವಾರು ಬಾರಿ ಮನವಿಯನ್ನು ಸಲ್ಲಸಿದ್ದೇವೆ. ಆದರೆ, ಇದುವರೆಗೂ ನಮಗೆ ಸಕಾರಾತ್ಮಕವಾದಂತಹ ಪ್ರತಿಕ್ರಿಯೆ ಸಿಕ್ಕಿಲ್ಲ ಎಂದರು.
 
ನ್ಯಾಯಮೂರ್ತಿ ಆಡಿ ನೇತೃತ್ವದ ಸಮಿತಿಯನ್ನು ರದ್ದುಗೊಳಿಸಿ: ಪ್ರಬಲ ಜಾತಿಗಳನ್ನು 2ಎ ಪ್ರವರ್ಗಕ್ಕೆ ಸೇರಿಸುವ ನಿಟ್ಟಿನಲ್ಲಿ ನ್ಯಾಯಮೂರ್ತಿ ಆಡಿ ಅವರ ನೇತೃತ್ವದಲ್ಲಿ ರಚಿಸಲಾಗಿರುವ ಸಮಿತಿಯನ್ನು ರದ್ದುಗೊಳಿಸಬೇಕು. ಈ ಸಮಿತಿಯಲ್ಲಿ ಪ್ರಬಲ ಜಾತಿಗೆ ಸೇರಿದವರನ್ನೇ ಸದಸ್ಯರನ್ನಾಗಿಸಿದ್ದು, ಇವರಿಂದ ನ್ಯಾಯಯುತವಾದಂತಹ ವಿಚಾರಣೆ ಸಾಧ್ಯವಿಲ್ಲ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments