ಮಂಡ್ಯದಲ್ಲಿ ಜಾತಿ ರಾಜಕೀಯ ಹೆಚ್ಚಾಗಿದೆ- ಆರ್.ಅಶೋಕ್ ಆರೋಪ

Webdunia
ಶುಕ್ರವಾರ, 5 ಏಪ್ರಿಲ್ 2019 (08:06 IST)
ಬೆಂಗಳೂರು : ಜೆಡಿಎಸ್ ಜಾತ್ಯಾತೀತ ಅಲ್ಲ, ಜಾತಿ ತಿಥಿ ಪಕ್ಷ ಎಂದು ಬಿಜೆಪಿ ಮುಖಂಡ ಆರ್.ಅಶೋಕ್ ಜೆಡಿಎಸ್ ವಿರುದ್ಧ ವ್ಯಂಗ್ಯವಾಡಿದ್ದಾರೆ.

ನಗರದ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜೆಡಿಎಸ್‍ ನವರು ಒಕ್ಕಲಿಗರನ್ನು ಗುತ್ತಿಗೆ ತೆಗೆದುಕೊಂಡಿದ್ದಾರಾ? ಸಾಕಷ್ಟು ಒಕ್ಕಲಿಗ ನಾಯಕರು ಬಂದು ಹೋಗಿದ್ದಾರೆ. ಮಾಜಿ ಸಿಎಂ ಕೆಂಗಲ್ ಹನುಮಂತಯ್ಯ ಅವರಿಗಿಂತ ದೊಡ್ಡ ಒಕ್ಕಲಿಗ ನಾಯಕರನ್ನು ರಾಜ್ಯ ಕಂಡಿಲ್ಲ. ಅವರು ಒಂದು ದಿನವೂ ಜಾತಿ ರಾಜಕಾರಣ ಮಾಡಿಲ್ಲ.


ಎಸ್.ಎಂ.ಕೃಷ್ಣ ಅವರು ಸಂಕಷ್ಟದಲ್ಲಿ ಸಿಎಂ ಆಗಿದ್ದರೂ ಜಾತಿ ರಾಜಕಾರಣ ಮಾಡಿಲ್ಲ. ಆದರೆ  ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಪ್ರಧಾನಿಯಾಗಿದ್ದವರು. ಎಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾರೆ. ಅವರಿಗೆ ಜಾತಿ ಹೆಸರಿನಲ್ಲಿ ರಾಜಕಾರಣ ಮಾಡಬಾರದು ಎನ್ನುವುದು ಗೊತ್ತಿಲ್ಲದೇ ಇರುವುದು ವಿಪರ್ಯಾಸ ಎಂದು ಹೇಳಿದ್ದಾರೆ


 

ಮಂಡ್ಯದಲ್ಲಿ ಜಾತಿ ರಾಜಕೀಯ ಹೆಚ್ಚಾಗಿದೆ. ಮೈತ್ರಿ ಅಭ್ಯರ್ಥಿಯ ಪರ ನಡೆದ ಪ್ರಚಾರದ ವೇಳೆ ನಾಯ್ಡು ಜನಾಂಗವನ್ನು ಅಪಮಾನ ಮಾಡಿದ್ದಾರೆ. ಜೆಡಿಎಸ್‍ನವರು ಆಂಧ್ರ ಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು ಅವರನ್ನು ಕರೆದು ಹಾರ ಹಾಕಿ, ಸನ್ಮಾನಿಸಿ ಅಪ್ಪಿಕೊಳ್ಳುತ್ತಾರೆ. ಚಂದ್ರಬಾಬು ಕೂಡ ನಾಯ್ಡು ಜನಾಂಗಕ್ಕೆ ಸೇರಿದವರು. ಜಾತಿ ರಾಜಕಾರಣ ಮಾಡಿದವರಿಗೆ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ತಕ್ಕ ಉತ್ತರ ನೀಡಿ, ಮೈತ್ರಿ ನಾಯಕರ ಬೆವರಿಳಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಟೆರರ್ ವೈದ್ಯ ಗ್ಯಾಂಗ್ ಅರೆಸ್ಟ್ ಆಗಿ ಭಾರತವನ್ನು ಸೇವ್ ಮಾಡಿದ್ದಕ್ಕೆ ಮೂಲ ಕಾರಣ ಇದೇ ಐಪಿಎಸ್ ಆಫೀಸರ್

ಭಯೋತ್ಪಾದಕ ಚಟುವಟಿಕೆಗೆ ವೈದ್ಯರನ್ನೇ ಬಳಸಿದ್ದು ಯಾಕೆ: ಇಲ್ಲಿದೆ ಶಾಕಿಂಗ್ ಕಾರಣ

ಬಿಜೆಪಿಯೇ ಬಾಂಬ್ ಬ್ಲಾಸ್ಟ್ ಮಾಡಿರಬಹುದು ಎಂದ ಜಮೀರ್ ಅಹ್ಮದ್: ನಾಚಿಕೆಯಾಗಲ್ವಾ ಎಂದ ನೆಟ್ಟಿಗರು

ಕಾಂಗ್ರೆಸ್ ಪಕ್ಷವನ್ನೇ ಮುಗಿಸಿಬಿಡ್ತೀನಿ ಹುಷಾರ್ ಎಂದ ಕೆಎನ್ ರಾಜಣ್ಣ

ಮುಂದಿನ ಸುದ್ದಿ
Show comments