Select Your Language

Notifications

webdunia
webdunia
webdunia
webdunia

ಕಾವೇರಿ ವಿವಾದ:ಇಂದು ಸರ್ವಪಕ್ಷ ಸಭೆ ಕರೆದ ಸಿಎಂ ಸಿದ್ದರಾಮಯ್ಯ

ಕಾವೇರಿ ವಿವಾದ:ಇಂದು ಸರ್ವಪಕ್ಷ ಸಭೆ ಕರೆದ ಸಿಎಂ ಸಿದ್ದರಾಮಯ್ಯ
ಬೆಂಗಳೂರು , ಶನಿವಾರ, 27 ಆಗಸ್ಟ್ 2016 (10:46 IST)
ಕಾವೇರಿ ನದಿಯಿಂದ ನೀರು ಬಿಡುವಂತೆ ತಮಿಳುನಾಡು ಸರಕಾರದ ಒತ್ತಡ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ವಪಕ್ಷ ಸಭೆ ಕರೆದಿದ್ದಾರೆ.
 
ವಿಧಾನಸೌಧದಲ್ಲಿ ನಡೆಯಲಿರುವ ಸರ್ವಪಕ್ಷ ಸಭೆಯಲ್ಲಿ ತಮಿಳುನಾಡಿನ ತಂತ್ರಕ್ಕೆ ಪರ್ಯಾಯ ತಂತ್ರ ರೂಪಿಸುವ ಕುರಿತು ಚರ್ಚೆ ನಡೆಯಲಿದ್ದು, ವಿಧಾನಮಂಡಲದ ಉಭಯ ವಿಪಕ್ಷ ನಾಯಕರು, ಕಾವೇರಿ ಜಲಾಯನ ಪ್ರದೇಶದ ಉಸ್ತುವಾರಿ ಸಚಿವರು ಹಾಗೂ ಕೇಂದ್ರ ಸಚಿವರು ಸಭೆಯಲ್ಲಿ ಭಾಗಿಯಾಗಲಿದ್ದಾರೆ.
 
ಮಳೆ ಕೊರತೆಯಿಂದಾಗಿ ರಾಜ್ಯದಲ್ಲಿ ನೀರಿನ ಸಮಸ್ಯೆ ಇರುವ ಹಿನ್ನೆಲೆಯಲ್ಲಿ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಆದರೆ, ಕರ್ನಾಟಕ ಪರ ವಕೀಲರಾಗಿರುವ ನಾರಿಮನ್ ಅವರು ತಮಿಳುನಾಡಿಗೆ ನೀರು ಬಿಡುವುದು ಸೂಕ್ತ ಎಂದು ಸಲಹೆ ನೀಡಿರುವ ಕುರಿತು ಸಭೆಯಲ್ಲಿ ಚರ್ಚೆಯಾಗಲಿದೆ. 
 
ಮಂಡ್ಯ ಜಿಲ್ಲೆಯ ಕೆಆರ್‌ಎಸ್ ನದಿಯಿಂದ 50 ಟಿಎಂಸಿ ನೀರನ್ನು ತಮಿಳುನಾಡಿಗೆ ಬಿಡುಗಡೆ ಮಾಡಲು ಕರ್ನಾಟಕ ಸರಕಾರಕ್ಕೆ ಸೂಚಿಸುವಂತೆ ಕೋರಿ ತಮಿಳುನಾಡು ಸರಕಾರ ಸುಪೀಂ ಕೋರ್ಟ್ ಮೋರೆ ಹೋಗಿತ್ತು.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಭಕ್ತೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದರಾ ಅಜ್ಮಿರ ದರ್ಗಾದ ಮೌಲ್ವಿಗಳು?