Webdunia - Bharat's app for daily news and videos

Install App

ಬಂದೇ ಬಿಟ್ಟಿತು ಕಾವೇರಿ ವಿವಾದದ ಸುಪ್ರೀಂ ತೀರ್ಪು! ಯಾರಿಗೆ ಎಷ್ಟು ನೀರು?

Webdunia
ಶುಕ್ರವಾರ, 16 ಫೆಬ್ರವರಿ 2018 (10:32 IST)
ನವದೆಹಲಿ: ಕೊನೆಗೂ ಬಹು ನಿರೀಕ್ಷಿತ ಕಾವೇರಿ ನದಿ ನೀರು ವಿವಾದದ ಅಂತಿಮ ತೀರ್ಪು ಬಂದಿದೆ. ಸುಪ್ರೀಂ ಕೋರ್ಟ್ ಇದೀಗ ತಾನೇ ಅಂತಿಮ ತೀರ್ಪು ಪ್ರಕಟಿಸಿದ್ದು, ಕರ್ನಾಟಕಕ್ಕೆ 14.5 ಟಿಎಂಸಿ ನೀರು  ಬಿಡಲಿದೆ.

ಸುಪ್ರೀಂ ಕೋರ್ಟ್ ನ ತ್ರಿಸದಸ್ಯ ಪೀಠ ಈ ಅಂತಿಮ ತೀರ್ಪು ನೀಡಿದೆ. ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರು ಅಂತಿಮ ತೀರ್ಪು ಪ್ರಕಟಿಸಿದ್ದು, ಆರಂಭದಲ್ಲೇ ಕರ್ನಾಟಕಕ್ಕೆ ಸಂವಿಧಾನದ ಅಡಿಯಲ್ಲಿ ಚೌಕಾಸಿ ಮಾಡುವ ಅಧಿಕಾರವಿದೆ ಎಂದರು.

‘ನ್ಯಾಯಾಧಿಕರಣ ಅನುಸರಿಸಿದ ಕ್ರಮ ಸರಿಯಾಗಿದೆ. ನದಿಗಳು ರಾಷ್ಟ್ರೀಯ ಸಂಪತ್ತು. ಯಾವುದೇ ಒಂದು ರಾಜ್ಯ ಸಂಪೂರ್ಣ ಹಕ್ಕು ಸ್ಥಾಪನೆ ಮಾಡುವಂತಿಲ್ಲ. ಎರಡೂ ರಾಜ್ಯಗಳು ಸಮಾನ ಹಂಚಿಕೆ ಮಾಡಬೇಕು. ಪುದುಚೇರಿ ಮತ್ತು ಕೇರಳಕ್ಕೆ ನೀಡುವ ನೀರು ಹಂಚಿಕೆಯಲ್ಲಿ ಬದಲಾವಣೆಯಿಲ್ಲ. ಈ ರಾಜ್ಯಗಳಿಗೆ ಯಥಾಸ್ಥಿತಿ ಕಾಯ್ದುಕೊಳ್ಳಬೇಕು.

ಕರ್ನಾಟಕ ತಮಿಳು ನಾಡಿಗೆ ಇನ್ನು ಮುಂದೆ 177 ಟಿಎಂಸಿ ನೀರು ಬಿಡಬೇಕು. ಈ ಮೊದಲು ಇದು 192 ಟಿಎಂಸಿ ಇತ್ತು’ ಎಂದು ನ್ಯಾಯಾಧೀಶರು ತೀರ್ಪು ನೀಡಿದ್ದಾರೆ. ಇದರೊಂದಿಗೆ ಕರ್ನಾಟಕಕ್ಕೆ ಕೊಂಚ ಮಟ್ಟಿನ ರಿಲೀಫ್ ಸಿಕ್ಕಿದೆ.

ಇದಲ್ಲದೆ ಕರ್ನಾಟಕ ಹೆಚ್ಚುವರಿ ಪ್ರದೇಶದಲ್ಲಿ ನೀರಾವರಿ ಮಾಡಬಹುದು ಎಂದು ತೀರ್ಪಿನಲ್ಲಿ ಹೇಳಲಾಗಿದೆ. ಈ ಮೂಲಕ ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್ ಭಾಗಶಃ ಗೆಲುವು ನೀಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ನೂತನ ಸಚಿವರ ಲಿಸ್ಟ್ ನೋಡಿ ಅಸಮಾಧಾನಿತರು ಕೇಳುತ್ತಿರುವುದು ಇದೇ ಮೂರು ಪ್ರಶ್ನೆ

ಹೊಸ ಸಚಿವರ ಲಿಸ್ಟ್ ನೋಡಿ ಕಾಂಗ್ರೆಸ್ ನಲ್ಲಿ ಅಸಮಾಧಾನ ಶುರು: ಯಾರಿಗೆ ಏನು ಅಸಮಾಧಾನ ನೋಡಿ

ಆಟೋ ಚಲಾಯಿಸುತ್ತಾ ಅಶ್ಲೀಲ ವಿಡಿಯೋ ವೀಕ್ಷಿಸುತ್ತಿದ್ದ ಚಾಲಕ: ಮಹಿಳೆ ಮಾಡಿದ್ದೇನು ನೋಡಿ Video

Karnataka Weather: ಇಂದು ಯಾವ ಜಿಲ್ಲೆಗಳಿಗೆ ರೆಡ್ ಅಲರ್ಟ್, ಆರೆಂಜ್ ಅಲರ್ಟ್ ಇಲ್ಲಿದೆ ವಿವರ

ಕರಾವಳಿಯಲ್ಲಿ ರಣಭೀಕರ ಮಳೆ ನಡುವೆ ಮುಂದಿನ 24ಗಂಟೆ ಹೇಗಿರಲಿದೆ ಗೊತ್ತಾ ಹವಾಮಾನ

ಮುಂದಿನ ಸುದ್ದಿ
Show comments